ಬೆಂಗಳೂರು: ಕಾಂಗ್ರೆಸ್ ಸರ್ಕಾರ ಜಿ.ಟಿ ದೇವೇಗೌಡರನ್ನ ಅರೆಸ್ಟ್ ಮಾಡಲು ಸಿದ್ಧತೆ ಮಾಡಿಕೊಂಡಿತ್ತು. ಕುಮಾರಸ್ವಾಮಿ ಇಲ್ಲದೇ ಹೋಗಿದ್ದರೆ, ಜಿ. ಟಿ. ದೇವೇಗೌಡ ಮತ್ತು ಅವರ ಪುತ್ರ ಜೈಲಿನಲ್ಲಿ ಕಾಲ ಕಳೆಯಬೇಕಾಗಿತ್ತು ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ 2017 ರಲ್ಲಿ ಜಿ.ಟಿ. ದೇವೇಗೌಡ ಅವರನ್ನು ಆರೆಸ್ಟ್ ಮಾಡಲು ಯೋಜನೆ ಹಾಕಿಕೊಂಡಿತು. ಈ ವಿಷಯ ಪೋಲಿಸ್ ಅಧಿಕಾರಿಗಳ ಮುಖಾಂತರ ನನಗೆ ಮುಟ್ಟಿತ್ತು. ಬಳಿಕ ಕುಮಾರಸ್ವಾಮಿ ಅವರು ಪೊಲೀಸರಿಗೆ ಕರೆ ಮಾಡಿ ಮಾತನಾಡಿದಾಗ, ಪೋಲಿಸರು ಜಿಟಿಡಿ ಅರೆಸ್ಟ್ ಮಾಡುವುದಕ್ಕೆ ಹಿಂದೇಟು ಹಾಕಿದರು. ಇಲ್ಲದೇ ಹೋಗಿದ್ರೆ ಜಿಟಿಡಿ ಮತ್ತು ಅವರ ಪುತ್ರ ನನ್ನ ಹಾಗೇ 20 ದಿನ ಜೈಲಿನಲ್ಲಿ ಕಳೆಯಬೇಕಾಗುವ ಸಂಭವವಿರುತ್ತಿತ್ತು ಎಂದು ಹೇಳಿದರು.
ಯಾವ ಕೇಸ್ ವಿಚಾರದಲ್ಲಿ ಎಂಬ ಪತ್ರಕರ್ತರ ಪ್ರಶ್ನೆಗೆ, ಈಗ ಅಧಿಕಾರದಲ್ಲಿರುವ ಕಾಂಗ್ರೆಸ್ ನಾಯಕರನ್ನು ಕೇಳಿ ಅಂತ ಕಾಂಗ್ರೆಸ್ ಮೇಲೆ ರೇವಣ್ಣ ಆರೋಪ ಮಾಡಿದರು.
ಇದೇ ವೇಳೆ ಜೆಡಿಎಸ್ ನಾಯಕ ಸುರೇಶ್ ಬಾಬು ಮಾತನಾಡಿ, ಜಿ.ಟಿ ದೇವೇಗೌಡರಿಗೆ ಪಕ್ಷದ ನಾಯಕರ ಮೇಲೆ ಅಸಮಾಧಾನ ಇರುವುದು ನಿಜ. ಆದರೆ ಅವರು ಕುರಿತು ಮಾತನಾಡಿದರೆ ಎಲ್ಲವೂ ಸರಿಯಾಗುತ್ತದೆ, ಮುಂದೆ ಸರಿಯಾಗುವ ವಿಶ್ವಾಸವಿದೆ ಎಂದು ಹೇಳಿದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…