ಬೆಂಗಳೂರು: ಕಾಂಗ್ರೆಸ್ ಸರ್ಕಾರ ಜಿ.ಟಿ ದೇವೇಗೌಡರನ್ನ ಅರೆಸ್ಟ್ ಮಾಡಲು ಸಿದ್ಧತೆ ಮಾಡಿಕೊಂಡಿತ್ತು. ಕುಮಾರಸ್ವಾಮಿ ಇಲ್ಲದೇ ಹೋಗಿದ್ದರೆ, ಜಿ. ಟಿ. ದೇವೇಗೌಡ ಮತ್ತು ಅವರ ಪುತ್ರ ಜೈಲಿನಲ್ಲಿ ಕಾಲ ಕಳೆಯಬೇಕಾಗಿತ್ತು ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ 2017 ರಲ್ಲಿ ಜಿ.ಟಿ. ದೇವೇಗೌಡ ಅವರನ್ನು ಆರೆಸ್ಟ್ ಮಾಡಲು ಯೋಜನೆ ಹಾಕಿಕೊಂಡಿತು. ಈ ವಿಷಯ ಪೋಲಿಸ್ ಅಧಿಕಾರಿಗಳ ಮುಖಾಂತರ ನನಗೆ ಮುಟ್ಟಿತ್ತು. ಬಳಿಕ ಕುಮಾರಸ್ವಾಮಿ ಅವರು ಪೊಲೀಸರಿಗೆ ಕರೆ ಮಾಡಿ ಮಾತನಾಡಿದಾಗ, ಪೋಲಿಸರು ಜಿಟಿಡಿ ಅರೆಸ್ಟ್ ಮಾಡುವುದಕ್ಕೆ ಹಿಂದೇಟು ಹಾಕಿದರು. ಇಲ್ಲದೇ ಹೋಗಿದ್ರೆ ಜಿಟಿಡಿ ಮತ್ತು ಅವರ ಪುತ್ರ ನನ್ನ ಹಾಗೇ 20 ದಿನ ಜೈಲಿನಲ್ಲಿ ಕಳೆಯಬೇಕಾಗುವ ಸಂಭವವಿರುತ್ತಿತ್ತು ಎಂದು ಹೇಳಿದರು.
ಯಾವ ಕೇಸ್ ವಿಚಾರದಲ್ಲಿ ಎಂಬ ಪತ್ರಕರ್ತರ ಪ್ರಶ್ನೆಗೆ, ಈಗ ಅಧಿಕಾರದಲ್ಲಿರುವ ಕಾಂಗ್ರೆಸ್ ನಾಯಕರನ್ನು ಕೇಳಿ ಅಂತ ಕಾಂಗ್ರೆಸ್ ಮೇಲೆ ರೇವಣ್ಣ ಆರೋಪ ಮಾಡಿದರು.
ಇದೇ ವೇಳೆ ಜೆಡಿಎಸ್ ನಾಯಕ ಸುರೇಶ್ ಬಾಬು ಮಾತನಾಡಿ, ಜಿ.ಟಿ ದೇವೇಗೌಡರಿಗೆ ಪಕ್ಷದ ನಾಯಕರ ಮೇಲೆ ಅಸಮಾಧಾನ ಇರುವುದು ನಿಜ. ಆದರೆ ಅವರು ಕುರಿತು ಮಾತನಾಡಿದರೆ ಎಲ್ಲವೂ ಸರಿಯಾಗುತ್ತದೆ, ಮುಂದೆ ಸರಿಯಾಗುವ ವಿಶ್ವಾಸವಿದೆ ಎಂದು ಹೇಳಿದರು.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…