Categories: ರಾಜ್ಯ

ಕುಮಾರಸ್ವಾಮಿ ಇಲ್ಲದೇ ಹೋಗಿದ್ರೆ ಜಿಟಿಡಿ ಮಗನೊಂದಿಗೆ ಜೈಲಿನಲ್ಲಿರಬೇಕಿತ್ತು: ರೇವಣ್ಣ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಜಿ.ಟಿ ದೇವೇಗೌಡರನ್ನ ಅರೆಸ್ಟ್‌ ಮಾಡಲು ಸಿದ್ಧತೆ ಮಾಡಿಕೊಂಡಿತ್ತು. ಕುಮಾರಸ್ವಾಮಿ ಇಲ್ಲದೇ ಹೋಗಿದ್ದರೆ, ಜಿ. ಟಿ. ದೇವೇಗೌಡ ಮತ್ತು ಅವರ ಪುತ್ರ ಜೈಲಿನಲ್ಲಿ ಕಾಲ ಕಳೆಯಬೇಕಾಗಿತ್ತು ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ 2017 ರಲ್ಲಿ ಜಿ.ಟಿ. ದೇವೇಗೌಡ ಅವರನ್ನು‌ ಆರೆಸ್ಟ್ ಮಾಡಲು ಯೋಜನೆ ಹಾಕಿಕೊಂಡಿತು. ಈ ವಿಷಯ ಪೋಲಿಸ್‌ ಅಧಿಕಾರಿಗಳ ಮುಖಾಂತರ ನನಗೆ ಮುಟ್ಟಿತ್ತು. ಬಳಿಕ ಕುಮಾರಸ್ವಾಮಿ ಅವರು ಪೊಲೀಸರಿಗೆ ಕರೆ ಮಾಡಿ ಮಾತನಾಡಿದಾಗ, ಪೋಲಿಸರು ಜಿಟಿಡಿ ಅರೆಸ್ಟ್‌ ಮಾಡುವುದಕ್ಕೆ ಹಿಂದೇಟು ಹಾಕಿದರು. ಇಲ್ಲದೇ ಹೋಗಿದ್ರೆ ಜಿಟಿಡಿ ಮತ್ತು ಅವರ ಪುತ್ರ ನನ್ನ ಹಾಗೇ 20 ದಿನ ಜೈಲಿನಲ್ಲಿ ಕಳೆಯಬೇಕಾಗುವ ಸಂಭವವಿರುತ್ತಿತ್ತು ಎಂದು ಹೇಳಿದರು.

ಯಾವ ಕೇಸ್‌ ವಿಚಾರದಲ್ಲಿ ಎಂಬ ಪತ್ರಕರ್ತರ ಪ್ರಶ್ನೆಗೆ, ಈಗ ಅಧಿಕಾರದಲ್ಲಿರುವ ಕಾಂಗ್ರೆಸ್‌ ನಾಯಕರನ್ನು ಕೇಳಿ ಅಂತ ಕಾಂಗ್ರೆಸ್ ಮೇಲೆ ‌ ರೇವಣ್ಣ ಆರೋಪ ಮಾಡಿದರು.

ಇದೇ ವೇಳೆ ಜೆಡಿಎಸ್‌ ನಾಯಕ ಸುರೇಶ್‌ ಬಾಬು ಮಾತನಾಡಿ, ಜಿ.ಟಿ ದೇವೇಗೌಡರಿಗೆ ಪಕ್ಷದ ನಾಯಕರ ಮೇಲೆ ಅಸಮಾಧಾನ ಇರುವುದು ನಿಜ. ಆದರೆ ಅವರು ಕುರಿತು ಮಾತನಾಡಿದರೆ ಎಲ್ಲವೂ ಸರಿಯಾಗುತ್ತದೆ, ಮುಂದೆ ಸರಿಯಾಗುವ ವಿಶ್ವಾಸವಿದೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

8 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

9 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

9 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

11 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

15 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

15 hours ago