ಉಡುಪಿ : ಹಿಂದೊಮ್ಮೆ ವರನಟ ಡಾ.ರಾಜ್ ಕುಮಾರ್ ಅವರಿಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಆಗುವ ಅವಕಾಶ ಒದಗಿತ್ತು, ಆದರೆ ಅಣ್ಣವ್ರು ಅದನ್ನು ನಯವಾಗಿ ನಿರಾಕರಿಸಿದ್ರು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಳೆಯ ನೆನಪನ್ನು ಮೆಲುಕು ಹಾಕಿದರು.
ಅದು ದಕ್ಷಿಣ ಭಾರತದಲ್ಲಿ ನಟರು ರಾಜಕೀಯ ಪ್ರವೇಶಿಸಿದ ಸಂದರ್ಭ, ಆಂದ್ರಪ್ರದೇಶದಲ್ಲಿ ಎನ್.ಟಿ ರಾಮ್ರಾವ್, ತಮಿಳುನಾಡಿನಲ್ಲಿ ಎಂಜಿಆರ್ ರಾಜಕೀಯಕ್ಕೆ ಬಂದಿದ್ದರು. ಅದೇ ರೀತಿ ಕರ್ನಾಟಕದಲ್ಲೂ ಡಾ.ರಾಜ್ಕುಮಾರ್ ರಾಜಕೀಯಕ್ಕೆ ಬಂದರೆ ಇಲ್ಲಿನ ಮುಖ್ಯಮಂತ್ರಿಯಾಗುತ್ತಾರೆ ಎನ್ನುವ ಮಾತುಗಳಿದ್ದವು.
ಅದಕ್ಕಾಗಿ ನಾವು ರಾಜ್ ಕುಮಾರ್ ಹಾಗೂ ಪಾರ್ವತಮ್ಮರನ್ನ ದೆಹಲಿಗೆ ಕರೆದುಕೊಂಡಿ ಹೋಗಿ ಇಂದಿರಾ ಗಾಂಧಿಯನ್ನು ಭೇಟಿ ಮಾಡಿಸಿ ಮಾತುಕತೆ ನಡೆಸಿದ್ದೇವು, ಆದರೆ ಡಾ.ರಾಜ್ಕುಮಾರ್ ನಾನು ರಾಜಕೀಯಕ್ಕೆ ಬರುವುದಿಲ್ಲ ಎಂದು ಹೇಳಿ ಮುಖ್ಯಮಂತ್ರಿ ಅವಕಾಶವನ್ನು ನಯವಾಗಿ ನಿರಾಕರಿಸಿದ್ದರು.
ಬಳಿಕ ರಾಜ್ಯಸಭಾ ಸದಸ್ಯತ್ವ ಸ್ವೀಕರಿಸುವಂತೆ ಇಂದಿರಾಗಾಂಧಿ ಕೇಳಿಕೊಂಡರು. ಅದನ್ನು ಕೂಡ ತಿರಸ್ಕರಿಸಿದ ತ್ಯಾಗಜೀವಿ ಡಾ.ರಾಜ್ಕುಮಾರ್ ಎಂದು ಶಿವರಾಜ್ ಕುಮಾರ ಸಮ್ಮುಖದಲ್ಲೇ ಮೊಯ್ಲಿ ಹಳೆಯ ನೆನಪನ್ನು ಸ್ಮರಿಸಿದರು.
ರಾಜ್ಕುಮಾರ್ ಅಂದಿನ ಕಾಲದಲಿ ರಾಜಕೀಯಕ್ಕೆ ಬಂದಿದ್ದರೆ ಇಂದಿಗೂ ಕರ್ನಾಟಕ ರಾಜಕೀಯದಲ್ಲಿ ರಾರಾಜಿಸುತ್ತಿದ್ದರು ಎಂದು ಹೇಳಿದರು.
ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…
ಸುತ್ತೂರು : ಕೇವಲ 1 ಎಕರೆ ಪ್ರದೇಶದಲ್ಲಿ ಸುಮಾರು 102 ಮಾದರಿಯ ವಿವಿಧ ತಳಿಯ ಬೆಳೆಗಳನ್ನು ಬೆಳೆಯಬಹುದೆಂಬುದನ್ನು ಸಾಬೀತು ಪಡಿಸಲಾಗಿದೆ.…
ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್ ಹಾಗೂ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ…