ಉಡುಪಿ : ಹಿಂದೊಮ್ಮೆ ವರನಟ ಡಾ.ರಾಜ್ ಕುಮಾರ್ ಅವರಿಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಆಗುವ ಅವಕಾಶ ಒದಗಿತ್ತು, ಆದರೆ ಅಣ್ಣವ್ರು ಅದನ್ನು ನಯವಾಗಿ ನಿರಾಕರಿಸಿದ್ರು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಳೆಯ ನೆನಪನ್ನು ಮೆಲುಕು ಹಾಕಿದರು.
ಅದು ದಕ್ಷಿಣ ಭಾರತದಲ್ಲಿ ನಟರು ರಾಜಕೀಯ ಪ್ರವೇಶಿಸಿದ ಸಂದರ್ಭ, ಆಂದ್ರಪ್ರದೇಶದಲ್ಲಿ ಎನ್.ಟಿ ರಾಮ್ರಾವ್, ತಮಿಳುನಾಡಿನಲ್ಲಿ ಎಂಜಿಆರ್ ರಾಜಕೀಯಕ್ಕೆ ಬಂದಿದ್ದರು. ಅದೇ ರೀತಿ ಕರ್ನಾಟಕದಲ್ಲೂ ಡಾ.ರಾಜ್ಕುಮಾರ್ ರಾಜಕೀಯಕ್ಕೆ ಬಂದರೆ ಇಲ್ಲಿನ ಮುಖ್ಯಮಂತ್ರಿಯಾಗುತ್ತಾರೆ ಎನ್ನುವ ಮಾತುಗಳಿದ್ದವು.
ಅದಕ್ಕಾಗಿ ನಾವು ರಾಜ್ ಕುಮಾರ್ ಹಾಗೂ ಪಾರ್ವತಮ್ಮರನ್ನ ದೆಹಲಿಗೆ ಕರೆದುಕೊಂಡಿ ಹೋಗಿ ಇಂದಿರಾ ಗಾಂಧಿಯನ್ನು ಭೇಟಿ ಮಾಡಿಸಿ ಮಾತುಕತೆ ನಡೆಸಿದ್ದೇವು, ಆದರೆ ಡಾ.ರಾಜ್ಕುಮಾರ್ ನಾನು ರಾಜಕೀಯಕ್ಕೆ ಬರುವುದಿಲ್ಲ ಎಂದು ಹೇಳಿ ಮುಖ್ಯಮಂತ್ರಿ ಅವಕಾಶವನ್ನು ನಯವಾಗಿ ನಿರಾಕರಿಸಿದ್ದರು.
ಬಳಿಕ ರಾಜ್ಯಸಭಾ ಸದಸ್ಯತ್ವ ಸ್ವೀಕರಿಸುವಂತೆ ಇಂದಿರಾಗಾಂಧಿ ಕೇಳಿಕೊಂಡರು. ಅದನ್ನು ಕೂಡ ತಿರಸ್ಕರಿಸಿದ ತ್ಯಾಗಜೀವಿ ಡಾ.ರಾಜ್ಕುಮಾರ್ ಎಂದು ಶಿವರಾಜ್ ಕುಮಾರ ಸಮ್ಮುಖದಲ್ಲೇ ಮೊಯ್ಲಿ ಹಳೆಯ ನೆನಪನ್ನು ಸ್ಮರಿಸಿದರು.
ರಾಜ್ಕುಮಾರ್ ಅಂದಿನ ಕಾಲದಲಿ ರಾಜಕೀಯಕ್ಕೆ ಬಂದಿದ್ದರೆ ಇಂದಿಗೂ ಕರ್ನಾಟಕ ರಾಜಕೀಯದಲ್ಲಿ ರಾರಾಜಿಸುತ್ತಿದ್ದರು ಎಂದು ಹೇಳಿದರು.
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…