ಉಡುಪಿ : ಹಿಂದೊಮ್ಮೆ ವರನಟ ಡಾ.ರಾಜ್ ಕುಮಾರ್ ಅವರಿಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಆಗುವ ಅವಕಾಶ ಒದಗಿತ್ತು, ಆದರೆ ಅಣ್ಣವ್ರು ಅದನ್ನು ನಯವಾಗಿ ನಿರಾಕರಿಸಿದ್ರು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಳೆಯ ನೆನಪನ್ನು ಮೆಲುಕು ಹಾಕಿದರು.
ಅದು ದಕ್ಷಿಣ ಭಾರತದಲ್ಲಿ ನಟರು ರಾಜಕೀಯ ಪ್ರವೇಶಿಸಿದ ಸಂದರ್ಭ, ಆಂದ್ರಪ್ರದೇಶದಲ್ಲಿ ಎನ್.ಟಿ ರಾಮ್ರಾವ್, ತಮಿಳುನಾಡಿನಲ್ಲಿ ಎಂಜಿಆರ್ ರಾಜಕೀಯಕ್ಕೆ ಬಂದಿದ್ದರು. ಅದೇ ರೀತಿ ಕರ್ನಾಟಕದಲ್ಲೂ ಡಾ.ರಾಜ್ಕುಮಾರ್ ರಾಜಕೀಯಕ್ಕೆ ಬಂದರೆ ಇಲ್ಲಿನ ಮುಖ್ಯಮಂತ್ರಿಯಾಗುತ್ತಾರೆ ಎನ್ನುವ ಮಾತುಗಳಿದ್ದವು.
ಅದಕ್ಕಾಗಿ ನಾವು ರಾಜ್ ಕುಮಾರ್ ಹಾಗೂ ಪಾರ್ವತಮ್ಮರನ್ನ ದೆಹಲಿಗೆ ಕರೆದುಕೊಂಡಿ ಹೋಗಿ ಇಂದಿರಾ ಗಾಂಧಿಯನ್ನು ಭೇಟಿ ಮಾಡಿಸಿ ಮಾತುಕತೆ ನಡೆಸಿದ್ದೇವು, ಆದರೆ ಡಾ.ರಾಜ್ಕುಮಾರ್ ನಾನು ರಾಜಕೀಯಕ್ಕೆ ಬರುವುದಿಲ್ಲ ಎಂದು ಹೇಳಿ ಮುಖ್ಯಮಂತ್ರಿ ಅವಕಾಶವನ್ನು ನಯವಾಗಿ ನಿರಾಕರಿಸಿದ್ದರು.
ಬಳಿಕ ರಾಜ್ಯಸಭಾ ಸದಸ್ಯತ್ವ ಸ್ವೀಕರಿಸುವಂತೆ ಇಂದಿರಾಗಾಂಧಿ ಕೇಳಿಕೊಂಡರು. ಅದನ್ನು ಕೂಡ ತಿರಸ್ಕರಿಸಿದ ತ್ಯಾಗಜೀವಿ ಡಾ.ರಾಜ್ಕುಮಾರ್ ಎಂದು ಶಿವರಾಜ್ ಕುಮಾರ ಸಮ್ಮುಖದಲ್ಲೇ ಮೊಯ್ಲಿ ಹಳೆಯ ನೆನಪನ್ನು ಸ್ಮರಿಸಿದರು.
ರಾಜ್ಕುಮಾರ್ ಅಂದಿನ ಕಾಲದಲಿ ರಾಜಕೀಯಕ್ಕೆ ಬಂದಿದ್ದರೆ ಇಂದಿಗೂ ಕರ್ನಾಟಕ ರಾಜಕೀಯದಲ್ಲಿ ರಾರಾಜಿಸುತ್ತಿದ್ದರು ಎಂದು ಹೇಳಿದರು.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…