ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆಗೆ ಮುಂದಾದರೆ ದುಷ್ಪರಿಣಾಮ ಎದುರಿಸ ಬೇಕಾಗುತ್ತದೆ ಎಂದು ದಾವಣಗೆರೆ ಜಿಲ್ಲಾ ಶೋಷಿತ ಸಮುದಾಯಗಳ ಜಿಲ್ಲಾ ಒಕ್ಕೂಟದ ಸಂಚಾಲಕ ಎಸ್. ಎಸ್. ಗಿರೀಶ್ ಕೆ. ರೇವಣಸಿದ್ದಪ್ಪ ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಏನಾದರೂ ತೊಂದರೆಯಾದರೆ ರಾಜ್ಯದಲ್ಲಿ ದಂಗೆಯಾಗುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಅವರು ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ. ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನಿಸಿದರೇ ಹಿಂದುಳಿದ ವರ್ಗಗಳ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ.
ರಾಜ್ಯದಲ್ಲಿ ಅಹಿಂದ ನಾಯಕರನ್ನ ತುಳಿಯೋ ಕೆಲಸ ನಡೆಯುತ್ತಿದೆ. ಸಿದ್ದರಾಮಯ್ಯ ಅವರು ಎಲ್ಲ ವರ್ಗದ ಜನರಿಗಾಗಿ ಕೆಲಸ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಳೆದುಕೊಂಡರೆ, ಮುಂದಿನ ದಿನಗಳಲ್ಲಿ ಅವರಂತಹ ಮುಖ್ಯಮಂತ್ರಿ ಯಾರೂ ಸಿಗುವುದಿಲ್ಲ. ಶೋಷಿತ ಸಮುದಾಯಗಳಿಗೆ ಸಿದ್ದರಾಮಯ್ಯರಿಂದ ಅನೇಕ ಕೆಲಸಗಳಾಗಬೇಕಿದೆ. ಒಂದು ವೇಳೆ ಅವರು ಅಧಿಕಾರದಿಂದ ಕೆಳಗಿಳಿದರೆ ರಾಜ್ಯದಲ್ಲಿ ದಂಗೆಯಾಗುತ್ತದೆ ಎಂದು
ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…