ರಾಜ್ಯ

ಸಿದ್ದರಾಮಯ್ಯ ಬದಲಿಸಿದರೆ ರಾಜ್ಯದಲ್ಲಿ ದಂಗೆ

ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆಗೆ ಮುಂದಾದರೆ ದುಷ್ಪರಿಣಾಮ ಎದುರಿಸ ಬೇಕಾಗುತ್ತದೆ ಎಂದು ದಾವಣಗೆರೆ ಜಿಲ್ಲಾ ಶೋಷಿತ ಸಮುದಾಯಗಳ ಜಿಲ್ಲಾ ಒಕ್ಕೂಟದ ಸಂಚಾಲಕ ಎಸ್. ಎಸ್. ಗಿರೀಶ್ ಕೆ. ರೇವಣಸಿದ್ದಪ್ಪ ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಏನಾದರೂ ತೊಂದರೆಯಾದರೆ ರಾಜ್ಯದಲ್ಲಿ ದಂಗೆಯಾಗುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಅವರು ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ. ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನಿಸಿದರೇ ಹಿಂದುಳಿದ ವರ್ಗಗಳ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ.

ರಾಜ್ಯದಲ್ಲಿ ಅಹಿಂದ ನಾಯಕರನ್ನ ತುಳಿಯೋ ಕೆಲಸ ನಡೆಯುತ್ತಿದೆ. ಸಿದ್ದರಾಮಯ್ಯ ಅವರು ಎಲ್ಲ ವರ್ಗದ ಜನರಿಗಾಗಿ ಕೆಲಸ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಳೆದುಕೊಂಡರೆ, ಮುಂದಿನ ದಿನಗಳಲ್ಲಿ ಅವರಂತಹ ಮುಖ್ಯಮಂತ್ರಿ ಯಾರೂ ಸಿಗುವುದಿಲ್ಲ. ಶೋಷಿತ ಸಮುದಾಯಗಳಿಗೆ ಸಿದ್ದರಾಮಯ್ಯರಿಂದ ಅನೇಕ ಕೆಲಸಗಳಾಗಬೇಕಿದೆ. ಒಂದು ವೇಳೆ ಅವರು ಅಧಿಕಾರದಿಂದ ಕೆಳಗಿಳಿದರೆ ರಾಜ್ಯದಲ್ಲಿ ದಂಗೆಯಾಗುತ್ತದೆ ಎಂದು

ಎಚ್ಚರಿಕೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

4 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

8 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

8 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

8 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

11 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

11 hours ago