ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆಗೆ ಮುಂದಾದರೆ ದುಷ್ಪರಿಣಾಮ ಎದುರಿಸ ಬೇಕಾಗುತ್ತದೆ ಎಂದು ದಾವಣಗೆರೆ ಜಿಲ್ಲಾ ಶೋಷಿತ ಸಮುದಾಯಗಳ ಜಿಲ್ಲಾ ಒಕ್ಕೂಟದ ಸಂಚಾಲಕ ಎಸ್. ಎಸ್. ಗಿರೀಶ್ ಕೆ. ರೇವಣಸಿದ್ದಪ್ಪ ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಏನಾದರೂ ತೊಂದರೆಯಾದರೆ ರಾಜ್ಯದಲ್ಲಿ ದಂಗೆಯಾಗುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಅವರು ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ. ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನಿಸಿದರೇ ಹಿಂದುಳಿದ ವರ್ಗಗಳ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ.
ರಾಜ್ಯದಲ್ಲಿ ಅಹಿಂದ ನಾಯಕರನ್ನ ತುಳಿಯೋ ಕೆಲಸ ನಡೆಯುತ್ತಿದೆ. ಸಿದ್ದರಾಮಯ್ಯ ಅವರು ಎಲ್ಲ ವರ್ಗದ ಜನರಿಗಾಗಿ ಕೆಲಸ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಳೆದುಕೊಂಡರೆ, ಮುಂದಿನ ದಿನಗಳಲ್ಲಿ ಅವರಂತಹ ಮುಖ್ಯಮಂತ್ರಿ ಯಾರೂ ಸಿಗುವುದಿಲ್ಲ. ಶೋಷಿತ ಸಮುದಾಯಗಳಿಗೆ ಸಿದ್ದರಾಮಯ್ಯರಿಂದ ಅನೇಕ ಕೆಲಸಗಳಾಗಬೇಕಿದೆ. ಒಂದು ವೇಳೆ ಅವರು ಅಧಿಕಾರದಿಂದ ಕೆಳಗಿಳಿದರೆ ರಾಜ್ಯದಲ್ಲಿ ದಂಗೆಯಾಗುತ್ತದೆ ಎಂದು
ಎಚ್ಚರಿಕೆ ನೀಡಿದ್ದಾರೆ.
ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…
ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…
ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…
ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…
ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…