ರಾಜ್ಯ

ಸಂಪುಟ ವಿಸ್ತರಣೆಯಾದರೆ ಡಿ.ಕೆ.ಶಿವಕುಮಾರ್‌ಗೆ ಪಂಗನಾಮ : ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಹೇಳಿದ ಕಾಂಗ್ರೆಸ್‌ ನಾಯಕರು ದೆಹಲಿಗೆ ಹೋಗುತ್ತಿರುವುದೇಕೆ? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ನವೆಂಬರ್‌ನಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂದು ನಾನು ಪದೇ ಪದೆ ಹೇಳಿದ್ದೆ. ಆದರೂ ಆ ರೀತಿ ಇಲ್ಲ ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದಾರೆ. ಈಗ ಡಿ.ಕೆ.ಶಿವಕುಮಾರ್‌ ಸೋದರರು ದೆಹಲಿಗೆ ಹೋಗಿ ಕುಳಿತಿದ್ದಾರೆ. ಸಿಎಂ ಬದಲಾವಣೆ ಇಲ್ಲವೆಂದ ಮೇಲೆ ಎಲ್ಲರೂ ಮಲ್ಲಿಕಾರ್ಜುನ ಖರ್ಗೆಯವನ್ನು ಏಕೆ ಭೇಟಿಯಾಗುತ್ತಿದ್ದಾರೆ? ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿದಿಲ್ಲ, ವನ್ಯಜೀವಿ-ಮಾನವ ಸಂಘರ್ಷ ಜೋರಾಗಿದೆ, ಮಳೆ ಹಾನಿ ಪರಿಹಾರ ನೀಡಿಲ್ಲ. ಹೀಗೆ ಅನೇಕ ಸಮಸ್ಯೆಗಳಿದ್ದರೂ ಸಿಎಂ ಕುರ್ಚಿಗಾಗಿ ಮ್ಯೂಸಿಕಲ್‌ ಚೇರ್‌ ಸ್ಪರ್ಧೆ ನಡೆಯುತ್ತಿದೆ. ಸಚಿವ ಸಂಪುಟ ವಿಸ್ತರಣೆಯಾದರೆ ಡಿ.ಕೆ.ಶಿವಕುಮಾರ್‌ಗೆ ಪಂಗನಾಮ ಸಿಗಲಿದೆ. ದೇವಸ್ಥಾನಗಳಿಗೆ ಹೋಗಿ ಪೂಜೆ ಮಾಡಿದ್ದು ವ್ಯರ್ಥವಾಗಲಿದೆ ಎಂದರು.

ಇದನ್ನು ಓದಿ: ಸಂಪುಟ ಪುನಾರಚನೆ ಆದರೆ ಸಿಎಂ ಬದಲಾವಣೆ ಆಗಲ್ಲ: ಸಚಿವ ಪರಮೇಶ್ವರ್‌

ಚೆನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಬಗ್ಗೆ ಅರಣ್ಯ ಸಚಿವರು ಉತ್ತರ ನೀಡಬೇಕಿದೆ. ಇದು ಆಘಾತಕಾರಿ ಸಂಗತಿಯಾಗಿದ್ದು, ಈ ಬಗ್ಗೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿದೆ. ಬೆಳಗಾವಿ ಅಧಿವೇಶನದಲ್ಲಿ ಆರಂಭದಿಂದಲೇ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕಿದೆ. ಕಳೆದ ಬಾರಿ ಚರ್ಚೆಯಾದ ಸಮಸ್ಯೆಗಳನ್ನು ಪರಿಹರಿಸಲಾಗಿದೆಯೇ ಎಂದು ತಿಳಿಸಬೇಕು. ಕಬ್ಬು ಬೆಳೆಗಾರರ ಸಮಸ್ಯೆ, ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ಮಾಡಲಾಗುವುದು. ಕೇಂದ್ರ ಸಚಿವರಾದ ಎಚ್‌.ಡಿ.ಕುಮಾರಸ್ವಾಮಿ ಅವರ ಜೊತೆ ಈ ಬಗ್ಗೆ ಮತ್ತೊಮ್ಮೆ ಚರ್ಚೆ ಮಾಡಲಾಗುವುದು ಎಂದರು.

ಚಾಮರಾಜನಗರದಲ್ಲಿ ರೈತರನ್ನು ಭೇಟಿ ಮಾಡಿದ್ದು, ಬೆಳೆ ಪರಿಹಾರ ಹಾಗೂ ಇತರೆ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದೇನೆ. ಪರಿಹಾರ ನೀಡದೆಯೇ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಪುಟಗಟ್ಟಲೆ ಭಾಷಣ ಮಾಡುತ್ತಾರೆಯೇ ಹೊರತು ಪರಿಹಾರ ನೀಡುವುದಿಲ್ಲ. ಜಿಎಸ್‌ಟಿ ಸಮಿತಿಯ ಸಭೆಗೆ ಹೋಗದೆ, ಸಲಹೆ ನೀಡಬೇಕಾದ ಸಭೆಗೆ ಹೋಗದೆ ಈಗ ಇಲ್ಲಿ ಬಂದು ಆರೋಪ ಮಾಡುತ್ತಾರೆ. ಇರುವ ಅವಕಾಶಗಳನ್ನು ಬಳಸಿಕೊಳ್ಳದೆಯೇ ಈಗ ಮಾತಾಡಿ ಪ್ರಯೋಜನವಿಲ್ಲ. ಸಿಎಂ ಸಿದ್ದರಾಮಯ್ಯ ಮನವಿ ಕೊಟ್ಟು ಬಂದು ನಾಟಕವಾಡುತ್ತಿದ್ದಾರೆ. ಮನವಿ ಕೊಟ್ಟು ಹೊರಗೆ ಬಂದ ನಂತರ ವಂಚನೆಯಾಗಿದೆ ಎಂದು ಆರೋಪ ಮಾಡುತ್ತಾರೆ ಎಂದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

16 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

16 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

16 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

16 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

16 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

16 hours ago