ಬೆಂಗಳೂರು: ಬೆಲೆ ಏರಿಕೆ ವಿಚಾರವಾಗಿ ರಾಜ್ಯ ಬಿಜೆಪಿ ನಾಯಕರು ತಾಕತ್ತಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಲಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸವಾಲು ಹಾಕಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಜನಾಕ್ರೋಶ ಯಾತ್ರೆ ನಡೆಸುತ್ತಿದ್ದಾರೆ. ಆದರೆ, ಕೇಂದ್ರದಲ್ಲಿ ತಮ್ಮದೇ ಪಕ್ಷ ಆಡಳಿತ ನಡೆಸುತ್ತಿದ್ದು, ಮೋದಿ ನೇತೃತ್ವದ ಸರ್ಕಾರ ಪೆಟ್ರೋಲ್, ಡಿಸೇಲ್ ಸೇರಿದಂತೆ ಅಡುಗೆ ಅನಿಲದ ದರ ಏರಿಕೆ ಮಾಡುವ ಮೂಲಕ ಇವರಿಗೆ ಕಪಾಳ ಮೋಕ್ಷ ಮಾಡಿದೆ. ತಾಕತ್ತಿದ್ದರೆ ಮೋದಿ ಪ್ರಶ್ನಿಸಲಿ ಎಂದು ವಾಗ್ದಾಳಿ ನಡೆಸಿದರು.
ನಾವು ಗ್ಯಾರಂಟಿ ನೀಡುವುದರ ಜೊತೆಗೆ ಅಭಿವೃದ್ದಿ ಮಾಡುತ್ತಿದ್ದೇವೆ. ಬಿಜೆಪಿಯವರ ರೀತಿ ಸುಳ್ಳು ಆಶ್ವಾಸನೆ ನೀಡಿಲ್ಲ. ಸಾರಿಗೆ ಸಿಬ್ಬಂದಿಗೆ ಬಿಜೆಪಿ ಹಣ ಇಟ್ಟಿರಲಿಲ್ಲ. ಆದರೆ, ನಮ್ಮ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿದ ಭರವಸೆ ಈಡೇರಿಸುವ ಜೊತೆಗೆ ಎಲ್ಲವನ್ನೂ ನಿರ್ವಹಣೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…