ರಾಜ್ಯ

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ (ಎಫ್ ಸಿ) ಮಾಡದಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.

ಚಿತ್ರದುರ್ಗದ ಹಿರಿಯೂರು ಬಳಿ ನಡೆದ ಖಾಸಗಿ ಬಸ್ ದುರಂತಕ್ಕೆ ಅವರು ತೀವ್ರ ವಿಷಾದ ವ್ಯಕ್ತಪಡಿಸಿದ್ದರು. ಬಸ್‌ನ ಡೀಸೆಲ್ ಟ್ಯಾಂಕಿಗೆ ಘರ್ಷಣೆಯಾಗಿರುವುದರಿಂದ ಬೆಂಕಿ ಹೊತ್ತಿಕೊಂಡಿದೆ. ಅಪಘಾತಕ್ಕೆ ಬಹುಶಃ ಅಜಾಗರೂಕತೆಯ ಚಾಲನೆ ಅಥವಾ ನಿದ್ದೆಯ ಮಂಪರು ಕಾರಣ ಇರಬಹುದು. ಸಾರಿಗೆ ಇಲಾಖೆಯ ಯೋಗೇಶ್ ಮತ್ತು ಹೆಚ್ಚುವರಿ ಆಯುಕ್ತ ಓಂಕಾರೇಶ್ವರ ಅವರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ನಿಖರ ಕಾರಣವನ್ನು ಪತ್ತೆ ಹಚ್ಚಲಿದ್ದಾರೆ ಎಂದರು.

ಇದನ್ನು ಓದಿ: ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು : ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಆಂಧ್ರಪ್ರದೇಶದಲ್ಲಿ ಬಸ್ ದುರಂತ ಸಂಭವಿಸಿದ ಬಳಿಕ ಸಾರಿಗೆ ಬಸ್‌ಗಳಲ್ಲಿ ಯಾವುದೇ ರೀತಿಯ ಸ್ಛೋಟಕಗಳನ್ನು ಸಾಗಿಸಬಾರದು ಎಂದು ಕಟ್ಟಪ್ಪಣೆ ಮಾಡಿದ್ದೇವೆ. ಪ್ರಯಾಣಿಕರನ್ನು ಹೊರತುಪಡಿಸಿ ಅನಗತ್ಯವಾದ ಲಗೇಜ್‌ಗಳನ್ನು ಸಾಗಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಹೇಳಿದರು.

೨೦೧೩ರಲ್ಲಿ ತಾವು ಸಾರಿಗೆ ಇಲಾಖೆಯ ಸಚಿವರಾಗಿದ್ದಾಗ ಜಪಾನ್ ಟ್ರಾವೆಲ್ಸ್‌ನ ಬಸ್ಸೊಂದು ಹೈದರಾಬಾದ್‌ಗೆ ಹೋಗುವಾಗ ಬೆಂಕಿ ಹೊತ್ತಿಕೊಂಡು ನಾಲ್ಕೈದು ಮಂದಿ ಸಾವನ್ನಪ್ಪಿದ್ದರು. ಆಗ ತಾವು ಗಮನಿಸಿದಂತೆ ಆ ಬಸ್‌ನಲ್ಲಿ ತುರ್ತು ನಿರ್ಗಮನದ ಬಾಗಿಲು ಇರಲಿಲ್ಲ. ಅಪಘಾತದ ಸಂದರ್ಭದಲ್ಲಿ ಗ್ಲಾಸ್ ಒಡೆದು ಆಚೆ ಬರಬೇಕಿತ್ತು. ಐಶಾರಾಮಿ ಬಸ್‌ಗಳು ೮ರಿಂದ ೧೦ ಅಡಿ ಎತ್ತರ ಇರುತ್ತವೆ. ಮಕ್ಕಳು, ವಯಸ್ಸಾದವರು, ಹೆಣ್ಣು ಮಕ್ಕಳು ಅಷ್ಟು ಎತ್ತರದಿಂದ ಜಿಗಿಯಲು ಸಾಧ್ಯವಾಗುವುದಿಲ್ಲ. ಈ ಕಾರಣಕ್ಕೆ ಸಾರಿಗೆ ಇಲಾಖೆಯ ೨೫ ಸಾವಿರ ಬಸ್‌ಗಳಿಗೆ, ಎಲ್ಲಾ ಖಾಸಗಿ ವಾಹನಗಳಿಗೆ, ಓಮ್ನಿ ಬಸ್‌ಗಳಿಗೆ, ಶಾಲಾ ವಾಹನಗಳಿಗೆ ಕಡ್ಡಾಯವಾಗಿ ತುರ್ತು ನಿರ್ಗಮನದ ಬಾಗಿಲನ್ನು ಅಳವಡಿಸಲಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

1 hour ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

2 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

2 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

3 hours ago

ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು : ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…

3 hours ago

ಅರಣ್ಯ ಇಲಾಖೆ ಖಾಯಂ ಅಧಿಕಾರಿ, ಸಿಬ್ಬಂದಿಗೆ ಸಿಹಿ ಸುದ್ದಿ : ೧ ಕೋಟಿ ರೂ.ಅಪಘಾತ ವಿಮೆ

ಬೆಂಗಳೂರು : ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ ೧ ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ…

3 hours ago