ರಾಜ್ಯ

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ (ಎಫ್ ಸಿ) ಮಾಡದಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.

ಚಿತ್ರದುರ್ಗದ ಹಿರಿಯೂರು ಬಳಿ ನಡೆದ ಖಾಸಗಿ ಬಸ್ ದುರಂತಕ್ಕೆ ಅವರು ತೀವ್ರ ವಿಷಾದ ವ್ಯಕ್ತಪಡಿಸಿದ್ದರು. ಬಸ್‌ನ ಡೀಸೆಲ್ ಟ್ಯಾಂಕಿಗೆ ಘರ್ಷಣೆಯಾಗಿರುವುದರಿಂದ ಬೆಂಕಿ ಹೊತ್ತಿಕೊಂಡಿದೆ. ಅಪಘಾತಕ್ಕೆ ಬಹುಶಃ ಅಜಾಗರೂಕತೆಯ ಚಾಲನೆ ಅಥವಾ ನಿದ್ದೆಯ ಮಂಪರು ಕಾರಣ ಇರಬಹುದು. ಸಾರಿಗೆ ಇಲಾಖೆಯ ಯೋಗೇಶ್ ಮತ್ತು ಹೆಚ್ಚುವರಿ ಆಯುಕ್ತ ಓಂಕಾರೇಶ್ವರ ಅವರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ನಿಖರ ಕಾರಣವನ್ನು ಪತ್ತೆ ಹಚ್ಚಲಿದ್ದಾರೆ ಎಂದರು.

ಇದನ್ನು ಓದಿ: ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು : ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಆಂಧ್ರಪ್ರದೇಶದಲ್ಲಿ ಬಸ್ ದುರಂತ ಸಂಭವಿಸಿದ ಬಳಿಕ ಸಾರಿಗೆ ಬಸ್‌ಗಳಲ್ಲಿ ಯಾವುದೇ ರೀತಿಯ ಸ್ಛೋಟಕಗಳನ್ನು ಸಾಗಿಸಬಾರದು ಎಂದು ಕಟ್ಟಪ್ಪಣೆ ಮಾಡಿದ್ದೇವೆ. ಪ್ರಯಾಣಿಕರನ್ನು ಹೊರತುಪಡಿಸಿ ಅನಗತ್ಯವಾದ ಲಗೇಜ್‌ಗಳನ್ನು ಸಾಗಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಹೇಳಿದರು.

೨೦೧೩ರಲ್ಲಿ ತಾವು ಸಾರಿಗೆ ಇಲಾಖೆಯ ಸಚಿವರಾಗಿದ್ದಾಗ ಜಪಾನ್ ಟ್ರಾವೆಲ್ಸ್‌ನ ಬಸ್ಸೊಂದು ಹೈದರಾಬಾದ್‌ಗೆ ಹೋಗುವಾಗ ಬೆಂಕಿ ಹೊತ್ತಿಕೊಂಡು ನಾಲ್ಕೈದು ಮಂದಿ ಸಾವನ್ನಪ್ಪಿದ್ದರು. ಆಗ ತಾವು ಗಮನಿಸಿದಂತೆ ಆ ಬಸ್‌ನಲ್ಲಿ ತುರ್ತು ನಿರ್ಗಮನದ ಬಾಗಿಲು ಇರಲಿಲ್ಲ. ಅಪಘಾತದ ಸಂದರ್ಭದಲ್ಲಿ ಗ್ಲಾಸ್ ಒಡೆದು ಆಚೆ ಬರಬೇಕಿತ್ತು. ಐಶಾರಾಮಿ ಬಸ್‌ಗಳು ೮ರಿಂದ ೧೦ ಅಡಿ ಎತ್ತರ ಇರುತ್ತವೆ. ಮಕ್ಕಳು, ವಯಸ್ಸಾದವರು, ಹೆಣ್ಣು ಮಕ್ಕಳು ಅಷ್ಟು ಎತ್ತರದಿಂದ ಜಿಗಿಯಲು ಸಾಧ್ಯವಾಗುವುದಿಲ್ಲ. ಈ ಕಾರಣಕ್ಕೆ ಸಾರಿಗೆ ಇಲಾಖೆಯ ೨೫ ಸಾವಿರ ಬಸ್‌ಗಳಿಗೆ, ಎಲ್ಲಾ ಖಾಸಗಿ ವಾಹನಗಳಿಗೆ, ಓಮ್ನಿ ಬಸ್‌ಗಳಿಗೆ, ಶಾಲಾ ವಾಹನಗಳಿಗೆ ಕಡ್ಡಾಯವಾಗಿ ತುರ್ತು ನಿರ್ಗಮನದ ಬಾಗಿಲನ್ನು ಅಳವಡಿಸಲಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

3 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

3 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

3 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

3 hours ago