ರಾಜ್ಯ

ವೀರಶೈವ-ಲಿಂಗಾಯತರು ಕೆಟ್ಟರೆ ರಾಜ್ಯವೇ ಕೆಡುತ್ತದೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ವೀರಶೈವ-ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಇಬ್ಬರೂ ಒಂದೇ ಎಂದು ಪರಮಪೂಜ್ಯ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರೇ ಪ್ರತಿಪಾದಿಸಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರಶೈವ-ಲಿಂಗಾಯತರು ಸುಧಾರಿಸಿದರೆ ರಾಜ್ಯ ಸುಧಾರಿಸುತ್ತದೆ, ವೀರಶೈವ ಲಿಂಗಾಯತರು ಕೆಟ್ಟರೆ ಇಡೀ ರಾಜ್ಯವೇ ಹಾಳಾಗುತ್ತದೆ ಎಂಬ ಜನಜನಿತ ಹೇಳಿಕೆ ಇದೆ. ನಮ್ಮ ಸಮುದಾಯದ ಒಗ್ಗಟ್ಟಿನಲ್ಲಿ ಬಲವಿದೆ. ವಿಘಟನೆಯಲ್ಲಿ ಸೋಲಿದೆ ಎಂದು ಪ್ರತಿಪಾದಿಸಿದರು.

ನಾವೆಲ್ಲರೂ ಭೌಗೋಳಿಕವಾಗಿ ಹಿಂದೂಗಳೇ ಆದರೂ, ನಮ್ಮ ಆಚಾರ-ವಿಚಾರವನ್ನು ಗೌರವಿಸಿ ಸಿಖ್, ಪಾರ್ಸಿ, ಜೈನರಿಗೆ ನೀಡಿರುವಂತೆ ಪ್ರತ್ಯೇಕ ಧರ್ಮದ ಮಾನ್ಯತೆಯನ್ನು ವೀರಶೈವ-ಲಿಂಗಾಯತ ಧರ್ಮಕ್ಕೆ ನೀಡಬೇಕು ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಸ್ವಾತಂತ್ರ್ಯಪೂರ್ವದಿಂದ ವಿಶೇಷವಾಗಿ 2000 ಇಸವಿಯಲ್ಲಿ ನಡೆದ ಜನಗಣತಿಯಿಂದಲೂ ಪ್ರತಿಪಾದಿಸುತ್ತಾ ಬಂದಿದೆ. ಜಾತಿಗಣತಿಯಲ್ಲಿ ನಮ್ಮ ಧರ್ಮಕ್ಕೆ ಪ್ರತ್ಯೇಕ ಕಾಲಂ ನೀಡಲು ಒತ್ತಾಯಿಸುತ್ತೇವೆ ಎಂದರು.

ಇದನ್ನು ಓದಿ : ಯತ್ನಾಳ್‌ ವಿರುದ್ದ ಲಿಂಗಾಯುತ ಸ್ವಾಮೀಜಿ ಆಕ್ರೋಶ

ವೀರಶೈವ-ಲಿಂಗಾಯತ ಸಮಾನಾರ್ಥಕ ಪದಗಳು. ಇಷ್ಟಲಿಂಗ ಪೂಜೆ ಮಾಡುವವರು ಮತ್ತು ಅಷ್ಟಾವರ್ಣ ಪಂಚಾಚಾರ ಷಟಸ್ಥಳ ಆಚರಣೆ ಮಾಡುವ ಗುರುಗಳು ಮತ್ತು ವಿರಕ್ತರೂ ಇದ್ದಾರೆ. ಹೀಗಾಗಿ ವೀರಶೈವರು ಮತ್ತು ಲಿಂಗಾಯತರು ಒಟ್ಟಿಗೆ ಇರಬೇಕು ಎಂಬುದು ಸಭಾದ ಸ್ಪಷ್ಟ ನಿಲುವಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಪ್ರತ್ಯೇಕ ಧರ್ಮದ ವಿಚಾರಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನ ಸಮುದಾಯದ ನಾಯಕರಾಗಿದ್ದಾರೆ. ಕೆಲವರು ರಾಜಕೀಯ ದುರುದ್ದೇಶದಿಂದ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.

ಬಸವಾದಿ ಶರಣರು ಸಮ ಸಮಾಜದ ಭವ್ಯ ಕನಸು ಕಂಡಿದ್ದರು. ಅದನ್ನೇ ಮುಖ್ಯಮಂತ್ರಿಗಳು ಪಾಲಿಸುತ್ತಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕೊಡಿಸಲು ಶ್ರಮಿಸುತ್ತಿದ್ದಾರೆ. ಬುದ್ಧ, ಬಸವ, ಅಂಬೇಡ್ಕರ್ ಸಿದ್ಧಾಂತವನ್ನು ಅವರು ಗೌರವಿಸುತ್ತಾರೆ. ಬಸವತತ್ವ ಸಾರ್ವಕಾಲಿಕ ಸತ್ಯವಾಗಿದೆ. ಹಿಂದೆ, ಇಂದು ಮತ್ತು ಮುಂದೆಯೂ ಇದು ಜಗತ್ತಿಗೆ ಮಾರ್ಗದರ್ಶನ ಮಾಡುತ್ತದೆ ಎಂದರು.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

24 mins ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

6 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

10 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

10 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

10 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

13 hours ago