ರಾಜ್ಯ

ವೀರಶೈವ-ಲಿಂಗಾಯತರು ಕೆಟ್ಟರೆ ರಾಜ್ಯವೇ ಕೆಡುತ್ತದೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ವೀರಶೈವ-ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಇಬ್ಬರೂ ಒಂದೇ ಎಂದು ಪರಮಪೂಜ್ಯ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರೇ ಪ್ರತಿಪಾದಿಸಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರಶೈವ-ಲಿಂಗಾಯತರು ಸುಧಾರಿಸಿದರೆ ರಾಜ್ಯ ಸುಧಾರಿಸುತ್ತದೆ, ವೀರಶೈವ ಲಿಂಗಾಯತರು ಕೆಟ್ಟರೆ ಇಡೀ ರಾಜ್ಯವೇ ಹಾಳಾಗುತ್ತದೆ ಎಂಬ ಜನಜನಿತ ಹೇಳಿಕೆ ಇದೆ. ನಮ್ಮ ಸಮುದಾಯದ ಒಗ್ಗಟ್ಟಿನಲ್ಲಿ ಬಲವಿದೆ. ವಿಘಟನೆಯಲ್ಲಿ ಸೋಲಿದೆ ಎಂದು ಪ್ರತಿಪಾದಿಸಿದರು.

ನಾವೆಲ್ಲರೂ ಭೌಗೋಳಿಕವಾಗಿ ಹಿಂದೂಗಳೇ ಆದರೂ, ನಮ್ಮ ಆಚಾರ-ವಿಚಾರವನ್ನು ಗೌರವಿಸಿ ಸಿಖ್, ಪಾರ್ಸಿ, ಜೈನರಿಗೆ ನೀಡಿರುವಂತೆ ಪ್ರತ್ಯೇಕ ಧರ್ಮದ ಮಾನ್ಯತೆಯನ್ನು ವೀರಶೈವ-ಲಿಂಗಾಯತ ಧರ್ಮಕ್ಕೆ ನೀಡಬೇಕು ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಸ್ವಾತಂತ್ರ್ಯಪೂರ್ವದಿಂದ ವಿಶೇಷವಾಗಿ 2000 ಇಸವಿಯಲ್ಲಿ ನಡೆದ ಜನಗಣತಿಯಿಂದಲೂ ಪ್ರತಿಪಾದಿಸುತ್ತಾ ಬಂದಿದೆ. ಜಾತಿಗಣತಿಯಲ್ಲಿ ನಮ್ಮ ಧರ್ಮಕ್ಕೆ ಪ್ರತ್ಯೇಕ ಕಾಲಂ ನೀಡಲು ಒತ್ತಾಯಿಸುತ್ತೇವೆ ಎಂದರು.

ಇದನ್ನು ಓದಿ : ಯತ್ನಾಳ್‌ ವಿರುದ್ದ ಲಿಂಗಾಯುತ ಸ್ವಾಮೀಜಿ ಆಕ್ರೋಶ

ವೀರಶೈವ-ಲಿಂಗಾಯತ ಸಮಾನಾರ್ಥಕ ಪದಗಳು. ಇಷ್ಟಲಿಂಗ ಪೂಜೆ ಮಾಡುವವರು ಮತ್ತು ಅಷ್ಟಾವರ್ಣ ಪಂಚಾಚಾರ ಷಟಸ್ಥಳ ಆಚರಣೆ ಮಾಡುವ ಗುರುಗಳು ಮತ್ತು ವಿರಕ್ತರೂ ಇದ್ದಾರೆ. ಹೀಗಾಗಿ ವೀರಶೈವರು ಮತ್ತು ಲಿಂಗಾಯತರು ಒಟ್ಟಿಗೆ ಇರಬೇಕು ಎಂಬುದು ಸಭಾದ ಸ್ಪಷ್ಟ ನಿಲುವಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಪ್ರತ್ಯೇಕ ಧರ್ಮದ ವಿಚಾರಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನ ಸಮುದಾಯದ ನಾಯಕರಾಗಿದ್ದಾರೆ. ಕೆಲವರು ರಾಜಕೀಯ ದುರುದ್ದೇಶದಿಂದ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.

ಬಸವಾದಿ ಶರಣರು ಸಮ ಸಮಾಜದ ಭವ್ಯ ಕನಸು ಕಂಡಿದ್ದರು. ಅದನ್ನೇ ಮುಖ್ಯಮಂತ್ರಿಗಳು ಪಾಲಿಸುತ್ತಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕೊಡಿಸಲು ಶ್ರಮಿಸುತ್ತಿದ್ದಾರೆ. ಬುದ್ಧ, ಬಸವ, ಅಂಬೇಡ್ಕರ್ ಸಿದ್ಧಾಂತವನ್ನು ಅವರು ಗೌರವಿಸುತ್ತಾರೆ. ಬಸವತತ್ವ ಸಾರ್ವಕಾಲಿಕ ಸತ್ಯವಾಗಿದೆ. ಹಿಂದೆ, ಇಂದು ಮತ್ತು ಮುಂದೆಯೂ ಇದು ಜಗತ್ತಿಗೆ ಮಾರ್ಗದರ್ಶನ ಮಾಡುತ್ತದೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

13 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

14 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

14 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

14 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

14 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

17 hours ago