ರಾಜ್ಯ

ಯಡಿಯೂರಪ್ಪ ಸರ್ಕಾರವಿದ್ದರೆ ನೆಟ್ಟಾರು ಹಂತಕನಿಗೆ ಮುತ್ತಿಕ್ಕಿದವನಿಗೆ ಗುಂಡಿಕ್ಕುತ್ತಿದ್ದೆವು: ಬಿ.ವೈ.ವಿಜಯೇಂದ್ರ

ಮಂಗಳೂರು: ಪ್ರವೀಣ್ ನೆಟ್ಟಾರು ಹಂತಕ ದೇಶದ್ರೋಹಿಗೆ ಮತ್ತೊಬ್ಬ ದೇಶದ್ರೋಹಿ ಮುತ್ತಿಡುತ್ತಾನೆ. ನಮ್ಮ ಸರ್ಕಾರ, ಯಡಿಯೂರಪ್ಪ ಸರ್ಕಾರವಿದ್ದಿದ್ದರೆ ಆ ದೇಶದ್ರೋಹಿಗೆ ಅಲ್ಲೇ ಗುಂಡಿಕ್ಕುತ್ತಿದ್ದೆವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗುಡುಗಿದ್ದಾರೆ.

ಮಂಗಳೂರಿನ ಕ್ಲಾಕ್ ಟವರ್ ಮುಂಭಾಗ ನಡೆದ ಜನಾಕ್ರೋಶ ಸಮಾವೇಶದಲ್ಲಿ ಆಕ್ರೋಶ ವ್ಯಕ್ತಪಡಿಸಿದ ಅವರು, ರಾಜ್ಯದಲ್ಲಿ ಹಿಂದೂಗಳಿಗೆ ಅಪಮಾನ ಮಾಡುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಉತ್ತರ ಕೊಡಬೇಕಿದೆ ಎಂದರು.

ಬಜೆಟ್‌ನಲ್ಲಿ ಮುಸ್ಲಿಮರಿಗೆ ಮೀಸಲಾತಿ ಕೊಡುವ ಈ ರಾಜ್ಯದ ಸಿಎಂ ಸಿದ್ದರಾಮಯ್ಯ ಮತ್ತು‌ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು. ಸಿದ್ದರಾಮಯ್ಯ ಮುಖ್ಯಮಂತ್ರಿ ಆದ ಮೇಲೆ ಐವತ್ತಕ್ಕೂ ಅಧಿಕ ವಸ್ತುಗಳ ಬೆಲೆ ಏರಿಕೆ ಅಗಿದೆ. ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿ ಅಲ್ಲ, ಕಾಂಗ್ರೆಸ್ ನ ಮುಖ್ಯಮಂತ್ರಿ. ಇಂಥಹ ಹಿಂದೂ ವಿರೋಧಿ ಸರ್ಕಾರವನ್ನು ಬಿಜೆಪಿ ಕಾರ್ಯಕರ್ತರು ಖಂಡಿತಾ ಕಿತ್ತು ಹಾಕುತ್ತಾರೆ‌ ಎಂದರು.

ಕರ್ನಾಟಕದಲ್ಲಿ ಜನವಿರೋಧಿ ಮತ್ತು ಬಡವರ ವಿರೋಧಿ ಕಾಂಗ್ರೆಸ್ ಸರ್ಕಾರವಿದೆ.‌ರಾಜ್ಯದ ಮುಖ್ಯಮಂತ್ರಿಯಾದ ಮೇಲೆ ಎಷ್ಟು ಬಾರಿ ಮಂಗಳೂರಿಗೆ ಭೇಟಿ ಕೊಟ್ರು, ಎಷ್ಟು ಅನುದಾನ ಕೊಟ್ರು?. ಯಡಿಯೂರಪ್ಪ ಸಿಎಂ ಆಗಿದ್ದಾಗ ದ.ಕ ಜಿಲ್ಲೆಗೆ 19,500 ಕೋಟಿ ರೂ. ಅನುದಾನ ಕೊಟ್ಟಿದ್ದಾರೆ. ದ.ಕ ಜಿಲ್ಲೆ ಕರ್ನಾಟಕ ರಾಜ್ಯದಲ್ಲಿ ಇಲ್ಲವೇ? ಹಾಗಾದರೆ. ಸ್ಪೀಕರ್ ಒಬ್ಬರು ಇದ್ದಾರೆ, ನಮ್ಮ ಶಾಸಕರು ಪ್ರತಿಭಟನೆ ಮಾಡಿದರೆ ಅಮಾನತು ಮಾಡ್ತಾರೆ. ಕಾನೂನು‌ ಬಾಹಿರವಾಗಿ ನಮ್ಮನ್ನು ಹೊರಗಡೆ ಓಡಿಸಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿ ಜನಾಕ್ರೋಶ ಯಾತ್ರೆಯು ಮಂಗಳೂರಿನ ಅಂಬೇಡ್ಕರ್ ವೃತ್ತದಿಂದ ಕ್ಲಾಕ್ ಟವರ್‌ವರೆಗೆ ಬೃಹತ್ ಪಾದಯಾತ್ರೆ ನಡೆಯಿತು. ಬಳಿಕ ಕ್ಲಾಕ್ ಟವರ್ ಮುಂಭಾಗ ನಡೆದ ಜನಾಕ್ರೋಶ ಸಮಾವೇಶ ನಡೆಯಿತು. ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಿಎಂ ಸದಾನಂದ ಗೌಡ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು, ಸಂಸದರು ಹಾಗೂ ಕಾರ್ಯಕರ್ತರು‌ ಭಾಗಿಯಾಗಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

9 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

11 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

19 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

19 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

19 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

19 hours ago