ರಾಜ್ಯ

ಯಾವುದಕ್ಕೆಲ್ಲಾ ಬೆಲೆ ಏರಿಕೆ ಮಾಡ್ತಿರೊ ಒಮ್ಮೆಲೆ ಮಾಡಿ ಬಿಡಿ: ಸಿದ್ದರಾಮಯ್ಯ ವಿರುದ್ದ ಅಶೋಕ್‌ ಕಿಡಿ

ಬೆಂಗಳೂರು: ದಿನನಿತ್ಯ ಬೆಲೆ ಏರಿಕೆ ಎಂಬ ಇಂಜೆಕ್ಷನ್‌ ಚುಚ್ಚುವ ಬದಲು. ಒಮ್ಮೆಲೆ ಬೆಲೆ ಏರಿಕೆಯ ಇಂಜೆಕ್ಷನ್‌ ಕೊಟ್ಟು ಬಿಡಿ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ್ದಾರೆ.

ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಎಲ್ಲದಕ್ಕೂ ಬೆಲೆ ಏರಿಕೆ ಮಾಡುತ್ತಿದೆ. ಸಿದ್ರಾಮಣ್ಣ ಯಾವುದಕ್ಕೆಲ್ಲಾ ಬೆಲೆ ಜಾಸ್ತಿ ಮಾಡಬೇಕು ಅಂದುಕೊಂಡಿದ್ದೀರಾ ಎಲ್ಲವನ್ನು ಒಟ್ಟಿಗೆ ಮಾಡಿ ಬಿಡಿ ಎಂದು ಮನವಿ ಮೂಲಕ ವ್ಯಂಗ್ಯವಾಡಿದ್ದಾರೆ.

ಮೆಟ್ರೋ ಟಿಕೆಟ್‌ ದರ ಏರಿಕೆಗೆ ಬಗ್ಗೆ ಸರ್ಕಾರ ಹುನ್ನಾರ ನಡೆಸುತ್ತಿದೆ. ಮೆಟ್ರೋ ಟಿಕೆಟ್‌ ದರ ಏರಿಸುವ ಮೂಲಕ ರಾಜ್ಯದ ಜನತೆಯ ಹಣವನ್ನು ಲೂಟಿ ಮಾಡಲು ಸರ್ಕಾರ ಚಿಂತಿಸುತ್ತಿದೆ. ಸಿದ್ರಾಮಣ್ಣ ಮತ್ತು ಕಾಂಗ್ರೆಸ್‌ ಪಕ್ಷಕ್ಕೆ ನಾನು ಪ್ರೀತಿಯಿಂದ ಕೇಳುತ್ತೇನೆ ಬೆಲೆ ಏರಿಕೆ ಮಾಡಿ ಜನತೆಯನ್ನು ಸಾಯಿಸಬೇಡಿ ಎಂದು ಮನವಿ ಮಾಡಿದ್ದಾರೆ.

ಬೆಂಗಳೂರು ಜನರ ಶಾಪ ರಾಜ್ಯ ಸರ್ಕಾರ ಮೇಲೆ ಜಾಸ್ತಿ ಆಗಿದೆ. ಹಾಲು, ವಿದ್ಯುತ್‌, ಸ್ಟಾಂಪ್‌ ಡ್ಯೂಟಿ, ಮೆಟ್ರೋ ದರ ಏರಿಕೆ ಈಗೆ ಎಲ್ಲ ಬೆಲೆ ಏರಿಕೆ ಆಗುತ್ತಿದೆ. ರಾಜ್ಯದ ಜನತೆಗೆ ಕಾಂಗ್ರೆಸ್‌ ತೆರಿಗೆಗಳ ಹೊರೆ ಹೊರಿಸುತ್ತಿದೆ. ಬೆಲೆ ಏರಿಕೆಯನ್ನು ನಿಲ್ಲಿಸುವ ಮೂಲಕ ರಾಜ್ಯದ ಜನತೆಯನ್ನು ನೆಮ್ಮದಿಯಾಗಿ ಬದುಕಲು ಬಿಡಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

7 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

7 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

8 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

8 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

8 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

9 hours ago