ಬೆಂಗಳೂರು: ದಿನನಿತ್ಯ ಬೆಲೆ ಏರಿಕೆ ಎಂಬ ಇಂಜೆಕ್ಷನ್ ಚುಚ್ಚುವ ಬದಲು. ಒಮ್ಮೆಲೆ ಬೆಲೆ ಏರಿಕೆಯ ಇಂಜೆಕ್ಷನ್ ಕೊಟ್ಟು ಬಿಡಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಎಲ್ಲದಕ್ಕೂ ಬೆಲೆ ಏರಿಕೆ ಮಾಡುತ್ತಿದೆ. ಸಿದ್ರಾಮಣ್ಣ ಯಾವುದಕ್ಕೆಲ್ಲಾ ಬೆಲೆ ಜಾಸ್ತಿ ಮಾಡಬೇಕು ಅಂದುಕೊಂಡಿದ್ದೀರಾ ಎಲ್ಲವನ್ನು ಒಟ್ಟಿಗೆ ಮಾಡಿ ಬಿಡಿ ಎಂದು ಮನವಿ ಮೂಲಕ ವ್ಯಂಗ್ಯವಾಡಿದ್ದಾರೆ.
ಮೆಟ್ರೋ ಟಿಕೆಟ್ ದರ ಏರಿಕೆಗೆ ಬಗ್ಗೆ ಸರ್ಕಾರ ಹುನ್ನಾರ ನಡೆಸುತ್ತಿದೆ. ಮೆಟ್ರೋ ಟಿಕೆಟ್ ದರ ಏರಿಸುವ ಮೂಲಕ ರಾಜ್ಯದ ಜನತೆಯ ಹಣವನ್ನು ಲೂಟಿ ಮಾಡಲು ಸರ್ಕಾರ ಚಿಂತಿಸುತ್ತಿದೆ. ಸಿದ್ರಾಮಣ್ಣ ಮತ್ತು ಕಾಂಗ್ರೆಸ್ ಪಕ್ಷಕ್ಕೆ ನಾನು ಪ್ರೀತಿಯಿಂದ ಕೇಳುತ್ತೇನೆ ಬೆಲೆ ಏರಿಕೆ ಮಾಡಿ ಜನತೆಯನ್ನು ಸಾಯಿಸಬೇಡಿ ಎಂದು ಮನವಿ ಮಾಡಿದ್ದಾರೆ.
ಬೆಂಗಳೂರು ಜನರ ಶಾಪ ರಾಜ್ಯ ಸರ್ಕಾರ ಮೇಲೆ ಜಾಸ್ತಿ ಆಗಿದೆ. ಹಾಲು, ವಿದ್ಯುತ್, ಸ್ಟಾಂಪ್ ಡ್ಯೂಟಿ, ಮೆಟ್ರೋ ದರ ಏರಿಕೆ ಈಗೆ ಎಲ್ಲ ಬೆಲೆ ಏರಿಕೆ ಆಗುತ್ತಿದೆ. ರಾಜ್ಯದ ಜನತೆಗೆ ಕಾಂಗ್ರೆಸ್ ತೆರಿಗೆಗಳ ಹೊರೆ ಹೊರಿಸುತ್ತಿದೆ. ಬೆಲೆ ಏರಿಕೆಯನ್ನು ನಿಲ್ಲಿಸುವ ಮೂಲಕ ರಾಜ್ಯದ ಜನತೆಯನ್ನು ನೆಮ್ಮದಿಯಾಗಿ ಬದುಕಲು ಬಿಡಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…