ರಾಜ್ಯ

ಪ್ರತಾಪ್‌ ಸಿಂಹಗೆ ಟಿಕೆಟ್‌ ಕೈ ತಪ್ಪಿದರೆ ಹೋರಾಟ ಮಾಡುತ್ತೇವೆ: ಮುತಾಲಿಕ್‌

ಬಾಗಲಕೋಟೆ: ಸಂಸದರಾಗಿ ಪ್ರತಾಪ್‌ ಸಿಂಹ ಕೇಂದ್ರ ಸರ್ಕಾರದಿಂದ ಹಣ ತಂದು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಹಣ ತಂದು ಅಭಿವೃದ್ಧಿ ಮಾಡಿದ್ದಾರೆ. ಇನ್ಯಾರಿಗೋ ಸಹಾಯ‌ ಮಾಡುವ ದೃಷ್ಟಿಯಿಂದ ಇವರಿಗೆ ಟಿಕೆಟ್ ತಪ್ಪಿಸುವುದನ್ನ ಕರ್ನಾಟಕದ ಮತದಾರರು ಕ್ಷಮಿಸುವುದಿಲ್ಲ. ಟಿಕೆಟ್‌ ಕೈ ತಪ್ಪಿದರೇ ನಾವು ಹೋರಾಟ ಮಾಡಬೇಕಾಗುತ್ತದೆ ಎಂದು ಪ್ರಮೋದ್‌ ಮುತಾಲಿಕ್‌ ಎಚ್ಚರಿಕೆ ನೀಡಿದರು.

ಸಂಸದ ಪ್ರತಾಪ್ ಸಿಂಹ ಅವರಿಗೆ ಲೋಕಸಭಾ ಟಿಕೆಟ್ ಕೈ ತಪ್ಪುವ ಸಾಧ್ಯತೆ ವಿಚಾರವಾಗಿ ಮಾತನಾಡಿದ ಮುತಾಲಿಕ್, ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಡೌಟ್ ಎನ್ನುವ ಬಗ್ಗೆ ಚರ್ಚೆ ಆಗುತ್ತಿದೆ. ಪ್ರತಾಪ್ ಸಿಂಹ ಅವರಿಗೆ ಎಂಪಿ ಟಿಕೆಟ್ ಡೌಟ್ ಅನ್ನುವಂತಹದ್ದು ಆಗಬಾರದು. ಇಡೀ ಕರ್ನಾಟಕದಲ್ಲಿ ಹಿಂದುತ್ವ ಹಾಗೂ ಅಭಿವೃದ್ಧಿಯನ್ನು ಸಮಾನಾಗಿ ಕೊಂಡ್ಯೊಯ್ದ ಏಕೈಕ ಸಂಸದರಾಗಿದ್ದಾರೆ. ಅಂತಹವರಿಗೆ ಡೌಟ್ ಅನ್ನುವ ಚರ್ಚೆಯೇ ಆಗಬಾರದು ಎಂದರು.

ಅಭಿವೃದ್ಧಿಯಲ್ಲಿ ಪ್ರತಾಪ್ ಸಿಂಹ ಅವರ ಕಾರ್ಯ ಶ್ಲಾಘನೀಯವಾಗಿದೆ ಆದರೆ, ಕೇಂದ್ರ ಸರ್ಕಾರ ಯಾಕೆ ಇವರ ಬಗ್ಗೆ ಚರ್ಚೆಗೆ ಅವಕಾಶ ಕೊಡುತ್ತಿದೆ ಎನ್ನುವುದು ಗೊತ್ತಾಗುತ್ತಿಲ್ಲ. ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೊಡದೇ ನೀಡದಿರುವುದು ಒಳ್ಳೆಯ ಬೆಳವಣಿಗೆ ಅಲ್ಲ, ಕರ್ನಾಟಕದ ಚುನಾವಣೆ ಮೇಲೆ ಇದು ಪರಿಣಾಮ ಬೀರುತ್ತದೆ ಎಂದರು.

ಮೈಸೂರಿನಿಂದ ಕೈ ಅಭ್ಯರ್ಥಿಯಾಗಿ ಯತೀಂದ್ರ ಅವರನ್ನು ಕಣಕ್ಕಿಳಿಸಲು, ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ತಪ್ಪಿಸಲು ಬಿಜೆಪಿ ಕಾಂಗ್ರೆಸ್ ರಾಜ್ಯ ನಾಯಕರ ಒಳ ಒಪ್ಪಂದವಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುತಾಲಿಕ್, ಪ್ರತಾಪ್ ಸಿಂಹ ಟಿಕೆಟ್ ತಪ್ಪಿಸಲು ಒಳ ಒಪ್ಪಂದಗಳು ಏನೇನು ಆಟ ನಡೆಯತ್ತಿದೆ. ಅದು ನಾಳೆ ಬಿಜೆಪಿಗೆ ದೊಡ್ಡ ಹೊಡೆತ ಬೀಳುತ್ತದೆ ಎಂದರು.

ಹಿಂದೂ ಕಾರ್ಯಕರ್ತ ರಾಜು ಹತ್ಯೆಯ ಸಮಯದಲ್ಲಿ ತಲ್ವಾರ್ ಹಿಡಕೊಂಡವರಿಗೆ ಎಚ್ಚರಿಕೆ ಕೊಟ್ಟಂತ ಏಕೈಕ ಸಂಸದ ಅವರು. ನೂರಾರು‌ ಕಿಲೋಮೀಟರ್ ಪಾದಯಾತ್ರೆ ಮಾಡಿ, ಯಶಸ್ವಿಯಾಗಿ ಹನುಮ ಜಯಂತಿಯನ್ನ ಮಾಡಿದ ಏಕೈಕ ಸಂಸದ ಅವರು. ಬೆಂಗಳೂರು- ಮೂಸೂರು ರಸ್ತೆ ಅಭಿವೃದ್ಧಿ ಮಾಡಿಸಿದ್ದು ಯಾರು? ಎಂದು ಪ್ರಶ್ನಿಸಿದರು.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago