ಬಾಗಲಕೋಟೆ: ಸಂಸದರಾಗಿ ಪ್ರತಾಪ್ ಸಿಂಹ ಕೇಂದ್ರ ಸರ್ಕಾರದಿಂದ ಹಣ ತಂದು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಹಣ ತಂದು ಅಭಿವೃದ್ಧಿ ಮಾಡಿದ್ದಾರೆ. ಇನ್ಯಾರಿಗೋ ಸಹಾಯ ಮಾಡುವ ದೃಷ್ಟಿಯಿಂದ ಇವರಿಗೆ ಟಿಕೆಟ್ ತಪ್ಪಿಸುವುದನ್ನ ಕರ್ನಾಟಕದ ಮತದಾರರು ಕ್ಷಮಿಸುವುದಿಲ್ಲ. ಟಿಕೆಟ್ ಕೈ ತಪ್ಪಿದರೇ ನಾವು ಹೋರಾಟ ಮಾಡಬೇಕಾಗುತ್ತದೆ ಎಂದು ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದರು.
ಸಂಸದ ಪ್ರತಾಪ್ ಸಿಂಹ ಅವರಿಗೆ ಲೋಕಸಭಾ ಟಿಕೆಟ್ ಕೈ ತಪ್ಪುವ ಸಾಧ್ಯತೆ ವಿಚಾರವಾಗಿ ಮಾತನಾಡಿದ ಮುತಾಲಿಕ್, ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಡೌಟ್ ಎನ್ನುವ ಬಗ್ಗೆ ಚರ್ಚೆ ಆಗುತ್ತಿದೆ. ಪ್ರತಾಪ್ ಸಿಂಹ ಅವರಿಗೆ ಎಂಪಿ ಟಿಕೆಟ್ ಡೌಟ್ ಅನ್ನುವಂತಹದ್ದು ಆಗಬಾರದು. ಇಡೀ ಕರ್ನಾಟಕದಲ್ಲಿ ಹಿಂದುತ್ವ ಹಾಗೂ ಅಭಿವೃದ್ಧಿಯನ್ನು ಸಮಾನಾಗಿ ಕೊಂಡ್ಯೊಯ್ದ ಏಕೈಕ ಸಂಸದರಾಗಿದ್ದಾರೆ. ಅಂತಹವರಿಗೆ ಡೌಟ್ ಅನ್ನುವ ಚರ್ಚೆಯೇ ಆಗಬಾರದು ಎಂದರು.
ಅಭಿವೃದ್ಧಿಯಲ್ಲಿ ಪ್ರತಾಪ್ ಸಿಂಹ ಅವರ ಕಾರ್ಯ ಶ್ಲಾಘನೀಯವಾಗಿದೆ ಆದರೆ, ಕೇಂದ್ರ ಸರ್ಕಾರ ಯಾಕೆ ಇವರ ಬಗ್ಗೆ ಚರ್ಚೆಗೆ ಅವಕಾಶ ಕೊಡುತ್ತಿದೆ ಎನ್ನುವುದು ಗೊತ್ತಾಗುತ್ತಿಲ್ಲ. ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೊಡದೇ ನೀಡದಿರುವುದು ಒಳ್ಳೆಯ ಬೆಳವಣಿಗೆ ಅಲ್ಲ, ಕರ್ನಾಟಕದ ಚುನಾವಣೆ ಮೇಲೆ ಇದು ಪರಿಣಾಮ ಬೀರುತ್ತದೆ ಎಂದರು.
ಮೈಸೂರಿನಿಂದ ಕೈ ಅಭ್ಯರ್ಥಿಯಾಗಿ ಯತೀಂದ್ರ ಅವರನ್ನು ಕಣಕ್ಕಿಳಿಸಲು, ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ತಪ್ಪಿಸಲು ಬಿಜೆಪಿ ಕಾಂಗ್ರೆಸ್ ರಾಜ್ಯ ನಾಯಕರ ಒಳ ಒಪ್ಪಂದವಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುತಾಲಿಕ್, ಪ್ರತಾಪ್ ಸಿಂಹ ಟಿಕೆಟ್ ತಪ್ಪಿಸಲು ಒಳ ಒಪ್ಪಂದಗಳು ಏನೇನು ಆಟ ನಡೆಯತ್ತಿದೆ. ಅದು ನಾಳೆ ಬಿಜೆಪಿಗೆ ದೊಡ್ಡ ಹೊಡೆತ ಬೀಳುತ್ತದೆ ಎಂದರು.
ಹಿಂದೂ ಕಾರ್ಯಕರ್ತ ರಾಜು ಹತ್ಯೆಯ ಸಮಯದಲ್ಲಿ ತಲ್ವಾರ್ ಹಿಡಕೊಂಡವರಿಗೆ ಎಚ್ಚರಿಕೆ ಕೊಟ್ಟಂತ ಏಕೈಕ ಸಂಸದ ಅವರು. ನೂರಾರು ಕಿಲೋಮೀಟರ್ ಪಾದಯಾತ್ರೆ ಮಾಡಿ, ಯಶಸ್ವಿಯಾಗಿ ಹನುಮ ಜಯಂತಿಯನ್ನ ಮಾಡಿದ ಏಕೈಕ ಸಂಸದ ಅವರು. ಬೆಂಗಳೂರು- ಮೂಸೂರು ರಸ್ತೆ ಅಭಿವೃದ್ಧಿ ಮಾಡಿಸಿದ್ದು ಯಾರು? ಎಂದು ಪ್ರಶ್ನಿಸಿದರು.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…