ರಾಜ್ಯ

ಪ್ರತಾಪ್‌ ಸಿಂಹಗೆ ಟಿಕೆಟ್‌ ಕೈ ತಪ್ಪಿದರೆ ಹೋರಾಟ ಮಾಡುತ್ತೇವೆ: ಮುತಾಲಿಕ್‌

ಬಾಗಲಕೋಟೆ: ಸಂಸದರಾಗಿ ಪ್ರತಾಪ್‌ ಸಿಂಹ ಕೇಂದ್ರ ಸರ್ಕಾರದಿಂದ ಹಣ ತಂದು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಹಣ ತಂದು ಅಭಿವೃದ್ಧಿ ಮಾಡಿದ್ದಾರೆ. ಇನ್ಯಾರಿಗೋ ಸಹಾಯ‌ ಮಾಡುವ ದೃಷ್ಟಿಯಿಂದ ಇವರಿಗೆ ಟಿಕೆಟ್ ತಪ್ಪಿಸುವುದನ್ನ ಕರ್ನಾಟಕದ ಮತದಾರರು ಕ್ಷಮಿಸುವುದಿಲ್ಲ. ಟಿಕೆಟ್‌ ಕೈ ತಪ್ಪಿದರೇ ನಾವು ಹೋರಾಟ ಮಾಡಬೇಕಾಗುತ್ತದೆ ಎಂದು ಪ್ರಮೋದ್‌ ಮುತಾಲಿಕ್‌ ಎಚ್ಚರಿಕೆ ನೀಡಿದರು.

ಸಂಸದ ಪ್ರತಾಪ್ ಸಿಂಹ ಅವರಿಗೆ ಲೋಕಸಭಾ ಟಿಕೆಟ್ ಕೈ ತಪ್ಪುವ ಸಾಧ್ಯತೆ ವಿಚಾರವಾಗಿ ಮಾತನಾಡಿದ ಮುತಾಲಿಕ್, ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಡೌಟ್ ಎನ್ನುವ ಬಗ್ಗೆ ಚರ್ಚೆ ಆಗುತ್ತಿದೆ. ಪ್ರತಾಪ್ ಸಿಂಹ ಅವರಿಗೆ ಎಂಪಿ ಟಿಕೆಟ್ ಡೌಟ್ ಅನ್ನುವಂತಹದ್ದು ಆಗಬಾರದು. ಇಡೀ ಕರ್ನಾಟಕದಲ್ಲಿ ಹಿಂದುತ್ವ ಹಾಗೂ ಅಭಿವೃದ್ಧಿಯನ್ನು ಸಮಾನಾಗಿ ಕೊಂಡ್ಯೊಯ್ದ ಏಕೈಕ ಸಂಸದರಾಗಿದ್ದಾರೆ. ಅಂತಹವರಿಗೆ ಡೌಟ್ ಅನ್ನುವ ಚರ್ಚೆಯೇ ಆಗಬಾರದು ಎಂದರು.

ಅಭಿವೃದ್ಧಿಯಲ್ಲಿ ಪ್ರತಾಪ್ ಸಿಂಹ ಅವರ ಕಾರ್ಯ ಶ್ಲಾಘನೀಯವಾಗಿದೆ ಆದರೆ, ಕೇಂದ್ರ ಸರ್ಕಾರ ಯಾಕೆ ಇವರ ಬಗ್ಗೆ ಚರ್ಚೆಗೆ ಅವಕಾಶ ಕೊಡುತ್ತಿದೆ ಎನ್ನುವುದು ಗೊತ್ತಾಗುತ್ತಿಲ್ಲ. ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೊಡದೇ ನೀಡದಿರುವುದು ಒಳ್ಳೆಯ ಬೆಳವಣಿಗೆ ಅಲ್ಲ, ಕರ್ನಾಟಕದ ಚುನಾವಣೆ ಮೇಲೆ ಇದು ಪರಿಣಾಮ ಬೀರುತ್ತದೆ ಎಂದರು.

ಮೈಸೂರಿನಿಂದ ಕೈ ಅಭ್ಯರ್ಥಿಯಾಗಿ ಯತೀಂದ್ರ ಅವರನ್ನು ಕಣಕ್ಕಿಳಿಸಲು, ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ತಪ್ಪಿಸಲು ಬಿಜೆಪಿ ಕಾಂಗ್ರೆಸ್ ರಾಜ್ಯ ನಾಯಕರ ಒಳ ಒಪ್ಪಂದವಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುತಾಲಿಕ್, ಪ್ರತಾಪ್ ಸಿಂಹ ಟಿಕೆಟ್ ತಪ್ಪಿಸಲು ಒಳ ಒಪ್ಪಂದಗಳು ಏನೇನು ಆಟ ನಡೆಯತ್ತಿದೆ. ಅದು ನಾಳೆ ಬಿಜೆಪಿಗೆ ದೊಡ್ಡ ಹೊಡೆತ ಬೀಳುತ್ತದೆ ಎಂದರು.

ಹಿಂದೂ ಕಾರ್ಯಕರ್ತ ರಾಜು ಹತ್ಯೆಯ ಸಮಯದಲ್ಲಿ ತಲ್ವಾರ್ ಹಿಡಕೊಂಡವರಿಗೆ ಎಚ್ಚರಿಕೆ ಕೊಟ್ಟಂತ ಏಕೈಕ ಸಂಸದ ಅವರು. ನೂರಾರು‌ ಕಿಲೋಮೀಟರ್ ಪಾದಯಾತ್ರೆ ಮಾಡಿ, ಯಶಸ್ವಿಯಾಗಿ ಹನುಮ ಜಯಂತಿಯನ್ನ ಮಾಡಿದ ಏಕೈಕ ಸಂಸದ ಅವರು. ಬೆಂಗಳೂರು- ಮೂಸೂರು ರಸ್ತೆ ಅಭಿವೃದ್ಧಿ ಮಾಡಿಸಿದ್ದು ಯಾರು? ಎಂದು ಪ್ರಶ್ನಿಸಿದರು.

andolanait

Recent Posts

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

29 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

32 mins ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

34 mins ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

36 mins ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

39 mins ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

43 mins ago