ರಾಜ್ಯ

ಪ್ರತಾಪ್‌ ಸಿಂಹಗೆ ಟಿಕೆಟ್‌ ಕೈ ತಪ್ಪಿದರೆ ಹೋರಾಟ ಮಾಡುತ್ತೇವೆ: ಮುತಾಲಿಕ್‌

ಬಾಗಲಕೋಟೆ: ಸಂಸದರಾಗಿ ಪ್ರತಾಪ್‌ ಸಿಂಹ ಕೇಂದ್ರ ಸರ್ಕಾರದಿಂದ ಹಣ ತಂದು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಹಣ ತಂದು ಅಭಿವೃದ್ಧಿ ಮಾಡಿದ್ದಾರೆ. ಇನ್ಯಾರಿಗೋ ಸಹಾಯ‌ ಮಾಡುವ ದೃಷ್ಟಿಯಿಂದ ಇವರಿಗೆ ಟಿಕೆಟ್ ತಪ್ಪಿಸುವುದನ್ನ ಕರ್ನಾಟಕದ ಮತದಾರರು ಕ್ಷಮಿಸುವುದಿಲ್ಲ. ಟಿಕೆಟ್‌ ಕೈ ತಪ್ಪಿದರೇ ನಾವು ಹೋರಾಟ ಮಾಡಬೇಕಾಗುತ್ತದೆ ಎಂದು ಪ್ರಮೋದ್‌ ಮುತಾಲಿಕ್‌ ಎಚ್ಚರಿಕೆ ನೀಡಿದರು.

ಸಂಸದ ಪ್ರತಾಪ್ ಸಿಂಹ ಅವರಿಗೆ ಲೋಕಸಭಾ ಟಿಕೆಟ್ ಕೈ ತಪ್ಪುವ ಸಾಧ್ಯತೆ ವಿಚಾರವಾಗಿ ಮಾತನಾಡಿದ ಮುತಾಲಿಕ್, ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಡೌಟ್ ಎನ್ನುವ ಬಗ್ಗೆ ಚರ್ಚೆ ಆಗುತ್ತಿದೆ. ಪ್ರತಾಪ್ ಸಿಂಹ ಅವರಿಗೆ ಎಂಪಿ ಟಿಕೆಟ್ ಡೌಟ್ ಅನ್ನುವಂತಹದ್ದು ಆಗಬಾರದು. ಇಡೀ ಕರ್ನಾಟಕದಲ್ಲಿ ಹಿಂದುತ್ವ ಹಾಗೂ ಅಭಿವೃದ್ಧಿಯನ್ನು ಸಮಾನಾಗಿ ಕೊಂಡ್ಯೊಯ್ದ ಏಕೈಕ ಸಂಸದರಾಗಿದ್ದಾರೆ. ಅಂತಹವರಿಗೆ ಡೌಟ್ ಅನ್ನುವ ಚರ್ಚೆಯೇ ಆಗಬಾರದು ಎಂದರು.

ಅಭಿವೃದ್ಧಿಯಲ್ಲಿ ಪ್ರತಾಪ್ ಸಿಂಹ ಅವರ ಕಾರ್ಯ ಶ್ಲಾಘನೀಯವಾಗಿದೆ ಆದರೆ, ಕೇಂದ್ರ ಸರ್ಕಾರ ಯಾಕೆ ಇವರ ಬಗ್ಗೆ ಚರ್ಚೆಗೆ ಅವಕಾಶ ಕೊಡುತ್ತಿದೆ ಎನ್ನುವುದು ಗೊತ್ತಾಗುತ್ತಿಲ್ಲ. ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೊಡದೇ ನೀಡದಿರುವುದು ಒಳ್ಳೆಯ ಬೆಳವಣಿಗೆ ಅಲ್ಲ, ಕರ್ನಾಟಕದ ಚುನಾವಣೆ ಮೇಲೆ ಇದು ಪರಿಣಾಮ ಬೀರುತ್ತದೆ ಎಂದರು.

ಮೈಸೂರಿನಿಂದ ಕೈ ಅಭ್ಯರ್ಥಿಯಾಗಿ ಯತೀಂದ್ರ ಅವರನ್ನು ಕಣಕ್ಕಿಳಿಸಲು, ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ತಪ್ಪಿಸಲು ಬಿಜೆಪಿ ಕಾಂಗ್ರೆಸ್ ರಾಜ್ಯ ನಾಯಕರ ಒಳ ಒಪ್ಪಂದವಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುತಾಲಿಕ್, ಪ್ರತಾಪ್ ಸಿಂಹ ಟಿಕೆಟ್ ತಪ್ಪಿಸಲು ಒಳ ಒಪ್ಪಂದಗಳು ಏನೇನು ಆಟ ನಡೆಯತ್ತಿದೆ. ಅದು ನಾಳೆ ಬಿಜೆಪಿಗೆ ದೊಡ್ಡ ಹೊಡೆತ ಬೀಳುತ್ತದೆ ಎಂದರು.

ಹಿಂದೂ ಕಾರ್ಯಕರ್ತ ರಾಜು ಹತ್ಯೆಯ ಸಮಯದಲ್ಲಿ ತಲ್ವಾರ್ ಹಿಡಕೊಂಡವರಿಗೆ ಎಚ್ಚರಿಕೆ ಕೊಟ್ಟಂತ ಏಕೈಕ ಸಂಸದ ಅವರು. ನೂರಾರು‌ ಕಿಲೋಮೀಟರ್ ಪಾದಯಾತ್ರೆ ಮಾಡಿ, ಯಶಸ್ವಿಯಾಗಿ ಹನುಮ ಜಯಂತಿಯನ್ನ ಮಾಡಿದ ಏಕೈಕ ಸಂಸದ ಅವರು. ಬೆಂಗಳೂರು- ಮೂಸೂರು ರಸ್ತೆ ಅಭಿವೃದ್ಧಿ ಮಾಡಿಸಿದ್ದು ಯಾರು? ಎಂದು ಪ್ರಶ್ನಿಸಿದರು.

andolanait

Recent Posts

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

3 hours ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

7 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

7 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

7 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

8 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

10 hours ago