dk shiv kumar (2)
ಬೆಂಗಳೂರು: ಚಾಮುಂಡಿ ತಾಯಿಯನ್ನು ಕೆಣಕಲು ಹೋದರೆ ರಾಜಕೀಯವಾಗಿ ಭಸ್ಮವಾಗಿ ಹೋಗುವಿರಿ ಎಚ್ಚರ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಡಿಸಿಎಂ ಡಿಕೆಶಿ ಅವರೇ ನಿಮ್ಮ ಪಕ್ಷದಲ್ಲಿ ನಿಮಗೆ ಎದುರಾಗಿರುವ ಕಂಟಕದಿಂದ ಪಾರಾಗಲು ಚಾಮುಂಡಿಬೆಟ್ಟ ಹಾಗೂ ಸಂಪ್ರದಾಯದ ದಸರಾವನ್ನು ಬಳಸಿಕೊಳ್ಳಬೇಡಿ. ಬಂಡೆಯೆಂದು ಬೀಗುತ್ತಿದ್ದ ನೀವು ಈಗಾಗಲೇ ಮುದ್ದೆಯಾಗಿ ಹೋಗಿದ್ದೀರಿ. ಚಾಮುಂಡಿ ತಾಯಿಯನ್ನು ಕೆಣಕಲು ಹೋದರೆ ರಾಜಕೀಯವಾಗಿ ಭಸ್ಮವಾಗಿ ಹೋಗುವಿರಿ ಎಚ್ಚರ. ಹಿಂದೂ ಪರಂಪರೆಯ ವಿಜಯದಶಮಿ ಹಬ್ಬವನ್ನು ಮಲಿನ ಮಾಡಲು ಹೊರಟಿದ್ದೀರಿ. ಮಹಿಷಾಸುರ ಮರ್ದಿನಿ ನಿಮ್ಮನ್ನು ಮರ್ದನ ಮಾಡುವ ಕಾಲ ದೂರವಿಲ್ಲ. ಚಾಮುಂಡಿ ತಾಯಿ ಶ್ರದ್ಧೆಯ ಭಕ್ತರ ಸ್ವತ್ತು. ಅದನ್ನು ಮುಟ್ಟಲು ಹೋದರೆ ಕಾದಿದೆ ನಿಮಗೆ ಆಪತ್ತು ಎಂದು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…