dk shiv kumar (2)
ಬೆಂಗಳೂರು: ಚಾಮುಂಡಿ ತಾಯಿಯನ್ನು ಕೆಣಕಲು ಹೋದರೆ ರಾಜಕೀಯವಾಗಿ ಭಸ್ಮವಾಗಿ ಹೋಗುವಿರಿ ಎಚ್ಚರ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಡಿಸಿಎಂ ಡಿಕೆಶಿ ಅವರೇ ನಿಮ್ಮ ಪಕ್ಷದಲ್ಲಿ ನಿಮಗೆ ಎದುರಾಗಿರುವ ಕಂಟಕದಿಂದ ಪಾರಾಗಲು ಚಾಮುಂಡಿಬೆಟ್ಟ ಹಾಗೂ ಸಂಪ್ರದಾಯದ ದಸರಾವನ್ನು ಬಳಸಿಕೊಳ್ಳಬೇಡಿ. ಬಂಡೆಯೆಂದು ಬೀಗುತ್ತಿದ್ದ ನೀವು ಈಗಾಗಲೇ ಮುದ್ದೆಯಾಗಿ ಹೋಗಿದ್ದೀರಿ. ಚಾಮುಂಡಿ ತಾಯಿಯನ್ನು ಕೆಣಕಲು ಹೋದರೆ ರಾಜಕೀಯವಾಗಿ ಭಸ್ಮವಾಗಿ ಹೋಗುವಿರಿ ಎಚ್ಚರ. ಹಿಂದೂ ಪರಂಪರೆಯ ವಿಜಯದಶಮಿ ಹಬ್ಬವನ್ನು ಮಲಿನ ಮಾಡಲು ಹೊರಟಿದ್ದೀರಿ. ಮಹಿಷಾಸುರ ಮರ್ದಿನಿ ನಿಮ್ಮನ್ನು ಮರ್ದನ ಮಾಡುವ ಕಾಲ ದೂರವಿಲ್ಲ. ಚಾಮುಂಡಿ ತಾಯಿ ಶ್ರದ್ಧೆಯ ಭಕ್ತರ ಸ್ವತ್ತು. ಅದನ್ನು ಮುಟ್ಟಲು ಹೋದರೆ ಕಾದಿದೆ ನಿಮಗೆ ಆಪತ್ತು ಎಂದು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…