ಬೆಂಗಳೂರು: ನಗರದಲ್ಲಿ ನೀರು ವ್ಯರ್ಥ ಮಾಡಿದ್ರೆ ಜಲಮಂಡಳಿ 5000 ರೂ ದಂಡ ವಿಧಿಸಲಿದೆ. ಬೇಸಿಗೆಗೆ ಮುನ್ನವೇ ಜಲಮಂಡಳಿ ಎಚ್ಚೆತ್ತುಕೊಂಡಿದ್ದು, ಕಳೆದ ಬಾರಿಯಂತೆ ಈ ಬಾರಿಯೂ ನೀರು ವ್ಯರ್ಥ ಮಾಡಿದ್ರೆ ದಂಡ ವಿಧಿಸಲು ಮುಂದಾಗಿದೆ. ಈ ಕುರಿತು ಜಲಮಂಡಳಿ ಆದೇಶ ಹೊರಡಿಸಿದೆ.
ಕಳೆದ ಬಾರಿ ಉಂಟಾದ ನೀರಿನ ಅಭಾವ, ಈ ಬಾರಿ ಆಗದಂತೆ ಜಲಮಂಡಳಿ ನೀರು, ಉಳಿತಾಯಕ್ಕೆ ಮುಂದಾಗಿದೆ. ಈ ಬಾರಿಯೂ ನೀರು ಪೋಲು ಮಾಡಿದ್ರೆ ದಂಡಾಸ್ತ್ರಕ್ಕೆ ಮುಂದಾಗಿದೆ. ಕಾರು, ಬೈಕ್, ಮನೆಯಂಗಳ ಇತರೆ ಕೆಲಸಗಳಿಗೆ ನೀರು ವ್ಯರ್ಥ ಮಾಡಿದ್ರೆ ಆಯಾ ವಲಯದ ಜಲಮಂಡಳಿ ಇಂಜಿನಿಯರ್ಸ್ 5 ಸಾವಿರ ರೂ ದಂಡ ವಿಧಿಸಲಿದ್ದಾರೆ.
ಇನ್ನು ಬೆಂಗಳೂರಿನಲ್ಲಿ ಕುಡಿಯುವ ನೀರನ್ನು ಸ್ವಚ್ಛತೆಗೆ, ಕೈತೋಟಕ್ಕೆ, ಕಟ್ಟಡ ನಿರ್ಮಾಣಕ್ಕೆ, ಮನರಂಜನೆಯ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ ಹಾಗೂ ಸಿನಿಮಾ ಮಂದಿರ ಹಾಗೂ ಮಾಲುಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆಗೆ ನಿಷೇಧಿಸಲಾಗಿದೆ. ಇದರ ಜೊತೆಗೆ ರಸ್ತೆ ನಿರ್ಮಾಣ ಹಾಗೂ ಸ್ವಚ್ಛತೆಗೆ ಕುಡಿಯುವ ನೀರನ್ನು ಬಳಕೆ ಮಾಡಿದ್ರೆ 5 ಸಾವಿರ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…