ಬೆಂಗಳೂರು: ನಗರದಲ್ಲಿ ನೀರು ವ್ಯರ್ಥ ಮಾಡಿದ್ರೆ ಜಲಮಂಡಳಿ 5000 ರೂ ದಂಡ ವಿಧಿಸಲಿದೆ. ಬೇಸಿಗೆಗೆ ಮುನ್ನವೇ ಜಲಮಂಡಳಿ ಎಚ್ಚೆತ್ತುಕೊಂಡಿದ್ದು, ಕಳೆದ ಬಾರಿಯಂತೆ ಈ ಬಾರಿಯೂ ನೀರು ವ್ಯರ್ಥ ಮಾಡಿದ್ರೆ ದಂಡ ವಿಧಿಸಲು ಮುಂದಾಗಿದೆ. ಈ ಕುರಿತು ಜಲಮಂಡಳಿ ಆದೇಶ ಹೊರಡಿಸಿದೆ.
ಕಳೆದ ಬಾರಿ ಉಂಟಾದ ನೀರಿನ ಅಭಾವ, ಈ ಬಾರಿ ಆಗದಂತೆ ಜಲಮಂಡಳಿ ನೀರು, ಉಳಿತಾಯಕ್ಕೆ ಮುಂದಾಗಿದೆ. ಈ ಬಾರಿಯೂ ನೀರು ಪೋಲು ಮಾಡಿದ್ರೆ ದಂಡಾಸ್ತ್ರಕ್ಕೆ ಮುಂದಾಗಿದೆ. ಕಾರು, ಬೈಕ್, ಮನೆಯಂಗಳ ಇತರೆ ಕೆಲಸಗಳಿಗೆ ನೀರು ವ್ಯರ್ಥ ಮಾಡಿದ್ರೆ ಆಯಾ ವಲಯದ ಜಲಮಂಡಳಿ ಇಂಜಿನಿಯರ್ಸ್ 5 ಸಾವಿರ ರೂ ದಂಡ ವಿಧಿಸಲಿದ್ದಾರೆ.
ಇನ್ನು ಬೆಂಗಳೂರಿನಲ್ಲಿ ಕುಡಿಯುವ ನೀರನ್ನು ಸ್ವಚ್ಛತೆಗೆ, ಕೈತೋಟಕ್ಕೆ, ಕಟ್ಟಡ ನಿರ್ಮಾಣಕ್ಕೆ, ಮನರಂಜನೆಯ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ ಹಾಗೂ ಸಿನಿಮಾ ಮಂದಿರ ಹಾಗೂ ಮಾಲುಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆಗೆ ನಿಷೇಧಿಸಲಾಗಿದೆ. ಇದರ ಜೊತೆಗೆ ರಸ್ತೆ ನಿರ್ಮಾಣ ಹಾಗೂ ಸ್ವಚ್ಛತೆಗೆ ಕುಡಿಯುವ ನೀರನ್ನು ಬಳಕೆ ಮಾಡಿದ್ರೆ 5 ಸಾವಿರ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…