ಬೆಂಗಳೂರು: ನಗರದಲ್ಲಿ ನೀರು ವ್ಯರ್ಥ ಮಾಡಿದ್ರೆ ಜಲಮಂಡಳಿ 5000 ರೂ ದಂಡ ವಿಧಿಸಲಿದೆ. ಬೇಸಿಗೆಗೆ ಮುನ್ನವೇ ಜಲಮಂಡಳಿ ಎಚ್ಚೆತ್ತುಕೊಂಡಿದ್ದು, ಕಳೆದ ಬಾರಿಯಂತೆ ಈ ಬಾರಿಯೂ ನೀರು ವ್ಯರ್ಥ ಮಾಡಿದ್ರೆ ದಂಡ ವಿಧಿಸಲು ಮುಂದಾಗಿದೆ. ಈ ಕುರಿತು ಜಲಮಂಡಳಿ ಆದೇಶ ಹೊರಡಿಸಿದೆ.
ಕಳೆದ ಬಾರಿ ಉಂಟಾದ ನೀರಿನ ಅಭಾವ, ಈ ಬಾರಿ ಆಗದಂತೆ ಜಲಮಂಡಳಿ ನೀರು, ಉಳಿತಾಯಕ್ಕೆ ಮುಂದಾಗಿದೆ. ಈ ಬಾರಿಯೂ ನೀರು ಪೋಲು ಮಾಡಿದ್ರೆ ದಂಡಾಸ್ತ್ರಕ್ಕೆ ಮುಂದಾಗಿದೆ. ಕಾರು, ಬೈಕ್, ಮನೆಯಂಗಳ ಇತರೆ ಕೆಲಸಗಳಿಗೆ ನೀರು ವ್ಯರ್ಥ ಮಾಡಿದ್ರೆ ಆಯಾ ವಲಯದ ಜಲಮಂಡಳಿ ಇಂಜಿನಿಯರ್ಸ್ 5 ಸಾವಿರ ರೂ ದಂಡ ವಿಧಿಸಲಿದ್ದಾರೆ.
ಇನ್ನು ಬೆಂಗಳೂರಿನಲ್ಲಿ ಕುಡಿಯುವ ನೀರನ್ನು ಸ್ವಚ್ಛತೆಗೆ, ಕೈತೋಟಕ್ಕೆ, ಕಟ್ಟಡ ನಿರ್ಮಾಣಕ್ಕೆ, ಮನರಂಜನೆಯ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ ಹಾಗೂ ಸಿನಿಮಾ ಮಂದಿರ ಹಾಗೂ ಮಾಲುಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆಗೆ ನಿಷೇಧಿಸಲಾಗಿದೆ. ಇದರ ಜೊತೆಗೆ ರಸ್ತೆ ನಿರ್ಮಾಣ ಹಾಗೂ ಸ್ವಚ್ಛತೆಗೆ ಕುಡಿಯುವ ನೀರನ್ನು ಬಳಕೆ ಮಾಡಿದ್ರೆ 5 ಸಾವಿರ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…