ಬೆಂಗಳೂರು : ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಇಂಡಿಯಾ ಘಟಬಂಧನ್ ಗೆಲ್ಲಿಸಿ ಅಧಿಕಾರಕ್ಕೆ ತಂದರೆ, ನನಗೆ ಎಲ್ಲಾ ಹುದ್ದೆಗಳು ಸಿಕ್ಕಂತೆ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಸ್ತ್ರ ತ್ಯಾಗ ಮಾಡಿದ್ದಾರೆಯೇ ಎಂಬ ಅನುಮಾನ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಬಿಹಾರ ಚುನಾವಣೆ ಸಂಬಂಧ ಬೆಂಗಳೂರಿನಲ್ಲಿ ಇರುವ ಬಿಹಾರಿ ಸಮುದಾಯದ ಜೊತೆ ಚರ್ಚೆ ನಡೆಸುವ ಸಂದರ್ಭದಲ್ಲಿ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ನೋಡುವ ಬಯಕೆ ಇದೆ ಎಂದು ಬಿಹಾರದ ಮೂಲದ ಪ್ರಮುಖರು ಅಭಿಲಾಷೆ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್, ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಮಹಾ ಘಟಬಂಧನ್ನನ್ನು ಗೆಲ್ಲಿಸಿದರೆ ನನಗೆ ಎಲ್ಲಾ ರೀತಿಯ ಸ್ಥಾನಗಳನ್ನು ಕೊಟ್ಟಂತಾಗುತ್ತದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇದೇ ತಿಂಗಳ ೨೧ರ ರೊಳಗಾಗಿ ತಮಗೆ ಅಧಿಕಾರ ಬಿಟ್ಟುಕೊಡಬೇಕೆಂದು ಶಿವಕುಮಾರ್ ಕಾಂಗ್ರೆಸ್ ಹೈಕಮಾಂಡ್ಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂಬ ವದಂತಿಗಳು ವ್ಯಾಪಕವಾಗಿವೆ.
ಇದನ್ನು ಓದಿ: ಬಿಹಾರ ವಿಧಾನಸಭೆ ಚುನಾವಣೆ: ಮಹಾಘಟಬಂಧನ್ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಹೆಸರು ಘೋಷಣೆ
ಇತ್ತೀಚೆಗೆ ಲಾಲ್ಬಾಗ್ನಲ್ಲಿ ಜನ ಸ್ಪಂದನ ಕಾರ್ಯಕ್ರಮ ನಡೆಸಿದಾಗ ಹಲವಾರು ಸಾರ್ವಜನಿಕರು ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಬೇಕೆಂದು ಒತ್ತಾಯಿಸಿದರು. ಆಗಲೂ ಶಿವಕುಮಾರ್, ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಮಾತ್ರ ಮಾತನಾಡಿ, ನನ್ನ ಬಗ್ಗೆ ಚರ್ಚೆ ಬೇಡ ಎಂದು ಹೇಳುವ ಮೂಲಕ ಧ್ವನಿ ಎತ್ತಿದವರನ್ನು ತಣ್ಣಗಾಗಿಸಿದರು.
ಪಕ್ಷದ ಶಾಸಕರಿಗೂ ಅನೇಕ ಬಾರಿ ಅಧಿಕಾರ ಹಂಚಿಕೆಯ ಬಗ್ಗೆ ಮಾತನಾಡಬೇಡಿ ಎಂದು ಹೇಳುವ ಮೂಲಕ ಎಲ್ಲರ ಬಾಯಿ ಮುಚ್ಚಿಸಿದ್ದಾರೆ. ಪಕ್ಷದ ಕಚೇರಿ ತಮಗೆ ದೇವಸ್ಥಾನವಿದ್ದಂತೆ, ಯಾವುದೇ ಅವಕಾಶಗಳಾದರೂ ವರಿಷ್ಠರಿಂದಲೇ ದೊರೆಯಬೇಕು ಎಂಬುದು ಶಿವಕುಮಾರ್ ಅವರ ಬಲವಾದ ನಂಬಿಕೆ. ಈ ಕಾರಣಕ್ಕೆ ರಾಜಕೀಯ ಚರ್ಚೆಗಳಿಗೆ ಅವರು ಇಂಬು ನೀಡುತ್ತಿಲ್ಲ. ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ರಾಜ್ಯ ರಾಜಕೀಯದಲ್ಲಿದೆ. ಹಾಗಿದ್ದರೂ ತಾವು ಮುಖ್ಯಮಂತ್ರಿ ಹುದ್ದೆಯ ಅಭ್ಯರ್ಥಿ ಅಲ್ಲ ಎಂದು ಪರೋಕ್ಷ ಸಂದೇಶದ ಮೂಲಕ ಶಿವಕುಮಾರ್ ಹೈಕಮಾಂಡ್ಗೆ ಯಾವ ರೀತಿಯ ಮಾಹಿತಿ ರವಾನೆ ಮಾಡುತ್ತಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ. ಕಾಂಗ್ರೆಸ್ನ ಒಳ ವಲಯದಲ್ಲಿ ಹೇಳುತ್ತಿರುವಂತೆ ನವೆಂಬರ್ ಕ್ರಾಂತಿ ನಡೆಯಲಿದೆಯೇ ಅಥವಾ ಎಲ್ಲವೂ ವದಂತಿಗಳೇ ಎಂಬ ಅನುಮಾನ ಕಾಡಲಾರಂಭಿಸಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…