ಬೆಂಗಳೂರು: ಮಂಡ್ಯ ಲೋಕಸಭಾ ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ಮಾಡುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು, ಪಾರ್ಟಿ ಹೇಳಿದ್ದನ್ನು ಮಾಡುತ್ತೇನೆ ಎಂದು ಮುಗುಳ್ನಕ್ಕರು.
ನಗರದಲ್ಲಿಂದು ಬಿಜೆಪಿಗೆ ಅಧಿಕೃತವಾಗಿ ಸೇರುವ ಮುನ್ನಾ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಕೇವಲ ಮಂಡ್ಯದಲ್ಲಿ ಮಾತ್ರ ನಡೆಯುತ್ತಿಲ್ಲ. ಪಕ್ಷದ ವರಿಷ್ಠರು ಯಾವ ಕ್ಷೇತ್ರದಲ್ಲಿ ಪ್ರಚಾರ ಮಾಡುವಂತೆ ಸೂಚಿಸುತ್ತಾರೋ ಅಲ್ಲಿ ಪ್ರಚಾರ ಮಾಡುತ್ತೇನೆ. ಕೇವಲ ಮಂಡ್ಯ ಮಾತ್ರ ಅಂತೇನಿಲ್ಲಾ ಎಂದರು.
ಮುಂದುವರಿದು ಬಿಜೆಪಿ ಸೇರ್ಪಡೆಗೊಂಡ ಬಳಿಕ ನಾನು ಪಕ್ಷದ ಚೌಕಟ್ಟಿನೊಳಗಡೆ ಕೆಲಸ ಮಾಡಬೇಕಾಗುತ್ತದೆ. ಅಲ್ಲಿ ಕಾರ್ಯಕರ್ತರು, ಹಿರಿಯ ಮುಖಂಡರಿರುತ್ತಾರೆ ಎಲ್ಲರೊಂದಿಗೆ ಜೊತೆಗೂಡಿ ಕೆಲಸ ಮಾಡುತ್ತೇನೆ ಎಂದು ಸುಮಲತಾ ಅಂಬರೀಶ್ ಹೇಳಿದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…