mahesh shetty timrodi
ಮಂಗಳೂರು: ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿಗೆ ಬಂಧನ ಭೀತಿ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ಕೋರ್ಟ್ಗೆ ತಿಮರೋಡಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದು, ನ್ಯಾಯಾಲಯ ವಿಚಾರಣೆಯನ್ನು ಸೆಪ್ಟೆಂಬರ್.30ಕ್ಕೆ ಮುಂದೂಡಿಕೆ ಮಾಡಿದೆ.
ಅಕ್ರಮವಾಗಿ ಎರಡು ತಲ್ವಾರ್ ಮತ್ತು ಒಂದು ಬಂದೂಕು ಪತ್ತೆಯಾದ ಪ್ರಕರಣಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಮೂರನೇ ನೋಟಿಸ್ ಜಾರಿ ಮಾಡಿದ್ದಾರೆ.
ಎರಡು ನೋಟಿಸ್ ಜಾರಿ ಮಾಡಿದ್ದರೂ ಇದುವರೆಗೂ ಮಹೇಶ್ ಶೆಟ್ಟಿ ತಿಮರೋಡಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಸೆ.26ರಂದು ಅವರ ಮನೆಗೆ ತೆರಳಿದ ಬೆಳ್ತಂಗಡಿ ಠಾಣೆ ಪೊಲೀಸರು ಮೂರನೇ ನೋಟಿಸ್ ಅಂಟಿಸಿದ್ದಾರೆ. ಸೆಪ್ಟೆಂಬರ್.29ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
10 ದಿನಗಳಿಂದ ಮಹೇಶ್ ಶೆಟ್ಟಿ ತಿಮರೋಡಿ ತಲೆಮರೆಸಿಕೊಂಡಿದ್ದಾರೆ. ಈ ನಡುವೆ ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…