mahesh shetty timrodi
ಮಂಗಳೂರು: ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿಗೆ ಬಂಧನ ಭೀತಿ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ಕೋರ್ಟ್ಗೆ ತಿಮರೋಡಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದು, ನ್ಯಾಯಾಲಯ ವಿಚಾರಣೆಯನ್ನು ಸೆಪ್ಟೆಂಬರ್.30ಕ್ಕೆ ಮುಂದೂಡಿಕೆ ಮಾಡಿದೆ.
ಅಕ್ರಮವಾಗಿ ಎರಡು ತಲ್ವಾರ್ ಮತ್ತು ಒಂದು ಬಂದೂಕು ಪತ್ತೆಯಾದ ಪ್ರಕರಣಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಮೂರನೇ ನೋಟಿಸ್ ಜಾರಿ ಮಾಡಿದ್ದಾರೆ.
ಎರಡು ನೋಟಿಸ್ ಜಾರಿ ಮಾಡಿದ್ದರೂ ಇದುವರೆಗೂ ಮಹೇಶ್ ಶೆಟ್ಟಿ ತಿಮರೋಡಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಸೆ.26ರಂದು ಅವರ ಮನೆಗೆ ತೆರಳಿದ ಬೆಳ್ತಂಗಡಿ ಠಾಣೆ ಪೊಲೀಸರು ಮೂರನೇ ನೋಟಿಸ್ ಅಂಟಿಸಿದ್ದಾರೆ. ಸೆಪ್ಟೆಂಬರ್.29ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
10 ದಿನಗಳಿಂದ ಮಹೇಶ್ ಶೆಟ್ಟಿ ತಿಮರೋಡಿ ತಲೆಮರೆಸಿಕೊಂಡಿದ್ದಾರೆ. ಈ ನಡುವೆ ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…