Mysore
20
few clouds

Social Media

ಸೋಮವಾರ, 16 ಮಾರ್ಚ್ 2026
Light
Dark

ಅಕ್ರಮ ಆರೋಪ : ಭೋವಿ ನಿಗಮದ ಅಧ್ಯಕ್ಷ ರಾಜೀನಾಮೆ

s ravikumar

ಬೆಂಗಳೂರು : ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಕಮಿಷನ್ ವಸೂಲಿ ಆರೋಪಕ್ಕೆ ಗುರಿಯಾಗಿರುವ ಭೋವಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ʼಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದು ಈ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದ್ದಾರೆ.

ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮವು ಭೂಒಡೆತನ ಯೋಜನೆ ಜಾರಿಗೊಳಿಸಲಾಗಿದ್ದು, ಈ ಯೋಜನೆಯಡಿ 60 ಎಕರೆ ಖರೀದಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕಿತ್ತು. ಈ ಫಲಾನುಭವಿಗಳಿಂದ ಶೇಕಡ 60ರಷ್ಟು ಕಮಿಷನ್ ನಿಗದಿ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಕುರಿತ ವಿಡಿಯೋವೊಂದು ವೈರಲ್ ಆಗಿತ್ತು.

Tags:
error: Content is protected !!