ಬೆಂಗಳೂರು: ಗಂಗೇನಹಳ್ಳಿ ಬಡಾವಣೆಯ ಜಮೀನು ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಇತ್ತೀಚಿಗೆ ಮಾಜಿ ಸಿಎಂ ಯಡಿಯೂರಪ್ಪ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು. ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೂ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಬರುವಂತೆ ನೋಟಿಸ್ ಜಾರಿ ಮಾಡಿದ್ದರು. ಇದೀಗ, ಅದರಂತೆ ವಿಚಾರಣೆಗೆ ಲೋಕಾ ಮುಂದೆ ಎಚ್ಡಿಕೆ ಹಾಜರಾಗಿದ್ದಾರೆ.
ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಕುಮಾರಸ್ವಾಮಿ ನೇರವಾಗಿ ಲೋಕಾಯುಕ್ತ ಕಚೇರಿಗೆ ತೆರಳಿದ್ದಾರೆ. 9 ವರ್ಷಗಳ ಹಿಂದೆ ದಾಖಲಾಗಿದ್ದ ತನಿಖೆ ಮಂದಗತಿಯಲ್ಲಿ ಸಾಗಿತ್ತು, ಇತ್ತಿಚೆಗೆ ಲೋಕಾ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದರು.
ಏನಿದು ಪ್ರಕರಣ?
ಗಂಗೇನೆಹಳ್ಳಿ ಬಡಾವಣೆಯ 7/1ಬಿ,ಸಿ ಹಾಗೂ ಸರ್ವೆ ನಂಬರ್ 1.11ಎಕರೆ ಜಮೀನು ಬಿಡಿಎಗೆ ಭೂಸ್ವಾದೀನಗೊಂಡಿದ್ದು, ಇದನ್ನು ಡಿನೋಟಿಫೈ ಮಾಡಬೇಕು ಎಂದು ರಾಜಶೇಖರಯ್ಯ ಎಂಬುವರು ಅರ್ಜಿ ಹಾಕುತ್ತಾರೆ. 2007ರಲ್ಲಿ ಬಂದ ಈ ಅರ್ಜಿಯನ್ನು ಅದೇ ದಿನ ಅಂದಿನ ಸಿಎಂ ಆಗಿದ್ದ ಎಚ್.ಡಿ ಕುಮಾರಸ್ವಾಮಿ ಅವರು ಡಿನೋಟಿಫೈ ಮಾಡಲು ಸೂಚಿಸಿದ್ದರು ಎಂದು ಇತ್ತೀಚೆಗೆ ಕಂದಾಯ ಸಚಿವ ಕೃಷ್ಣೆಬೈರೇಗೌಡ ಆರೋಪಿಸಿದ್ದರು.
ಈ ಪ್ರಕರಣ ಸಂಬಂಧ ಲೋಕಾ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಎಚ್ಡಿಕೆ ಗೆ ಸೂಚಿಸಿದ್ದರು. ಈ ಹಿನ್ನೆಲೆ ವಿಚಾರಣೆಗೆ ಹಾಜರಾಗಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…