Mysore
26
haze

Social Media

ಭಾನುವಾರ, 29 ಮಾರ್ಚ್ 2026
Light
Dark

ಅಕ್ರಮ ಗಣಿಗಾರಿಕೆ ಪ್ರಕರಣ: ಫೆ.24ಕ್ಕೆ ಅಂತಿಮ ತೀರ್ಪು

ಬೆಂಗಳೂರು: ಮಾಜಿ ಸಚಿವ ಆನಂದ್‌ ಸಿಂಗ್ ವಿರುದ್ಧ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 24ಕ್ಕೆ ಅಂತಿಮ ತೀರ್ಪು ಪ್ರಕಟಿಸುವುದಾಗಿ ಕೋರ್ಟ್‌ ಹೇಳಿದೆ.

ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ. ಗಜಾನನ ಭಟ್‌ ಅವರಿದ್ದ ಏಕ ಸದಸ್ಯ ಪೀಠ ಅಂತಿಮ ತೀರ್ಪುನ್ನು 24ಕ್ಕೆ ಮುಂದೂಡಿದೆ.

ಮಾಜಿ ಸಚಿವ ಆನಂದ ಸಿಂಗ್‌ ವಿರುದ್ಧ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ ಆದೇಶಿಸಿತ್ತು. ಈ ಆದೇಶದ ಹಿನ್ನಲೆ 2015ರಲ್ಲಿ ಪ್ರಕರಣ ದಾಖಲಿಸಿಕೊಂಡ ಕರ್ನಾಟಕ ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸಿತ್ತು.

ಡಿವೈಎಸ್ಪಿ ವೇಣುಗೋಪಾಲ್‌ ನೇತೃತ್ವದ ತಂಡ ತನಿಖೆ ನಡೆಸಿ, ಜೈಸಿಂಗ್‌ಪುರದ ಬಳಿ ಎಸ್‌ವಿಕೆ ಪ್ಲಾಟ್‌ನಲ್ಲಿ 16,976 ಮೆಟ್ರಿಕ್‌ ಟನ್‌ ಅದಿರು ಅಕ್ರಮ ಗಣಿಗಾರಿಕೆ ನಡೆದಿದೆ ಎಂದು ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.

Tags:
error: Content is protected !!