ರಾಜ್ಯ

ವಾಲ್ಮೀಕಿ, ಮುಡಾ ಹಗರಣ ಬೆನ್ನಲ್ಲೇ ಪ್ರವಾಸೋದ್ಯಮ ಇಲಾಖೆಯಲ್ಲಿ ಅಕ್ರಮ ಹಣ ವರ್ಗಾವಣೆ ಪತ್ತೆ

ಬಾಗಲಕೋಟೆ: ರಾಜ್ಯ ರಾಜಕೀಯದಲ್ಲಿ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ವಾಲ್ಮೀಕಿ ನಿಗಮ ಹಗರಣದ ತನಿಖೆ ಚುರುಕಾಗಿರುವ ನಡುವೆಯೇ ಇದೀಗ ಬಾಗಲಕೋಟೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಬ್ಯಾಂಕ್‌ ಖಾತೆಯಲ್ಲಿದ್ದ 2.47 ಕೋಟಿಗೂ ಹೆಚ್ಚಿನ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಅಧಿಕಾರಿಗಳ ಗಮನಕ್ಕೆ ಬಾರದೇ ಈ ಹಣದ ವರ್ಗಾವಣೆ ಆಗಿದೆ ಎಂದು ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಅಕ್ರಮವಾಗಿ ಹಣ ವರ್ಗಾವಣೆಯಾಗಿರುವ ಮಾಹಿತಿ ಬರುತ್ತಲೇ ಬಾಗಲಕೋಟೆಯ ಐಡಿಬಿಐ ಬ್ಯಾಂಕ್‌ ಮ್ಯಾನೇಜರ್‌ ಮತ್ತು ಸಿಬ್ಬಂದಿ ವಿರುದ್ಧ ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಗೋಪಾಲ ಹಿತ್ತಲಮನಿ ಅವರು ಜುಲೈ.11ರಂದು ದೂರು ದಾಖಲಿಸಿದ್ದು, ತನಿಖೆ ಆರಂಭವಾಗಿದೆ.

ಕಳೆದ ಮೂರು ವರ್ಷಗಳಲ್ಲಿ ಅಕ್ರಮವಾಗಿ ಹಣ ವರ್ಗಾವಣೆಯಾಗುತ್ತಿದ್ದರೂ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಈ ಕುರಿತು ಯಾವುದೇ ಪರಿಶೀಲನೆ ನಡೆಸದೇ ಹೋಗಿದ್ದು ಅಚ್ಚರಿಕೆ ಕಾರಣವಾಗಿದೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್‌ ಅವರು, ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆಯ 2.47 ಕೋಟಿ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವ ಕುರಿತು ಈಗಾಗಲೇ ನಮ್ಮ ಇಲಾಖೆಯಿಂದ ದೂರು ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿ ಸಂಗ್ರಹಿಸಲು ತಿಳಿಸಲಾಗಿದೆ. ಹಗರಣದಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

41 mins ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

43 mins ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

45 mins ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

48 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

50 mins ago

ಮಲೆ ಮಹದೇಶ್ವರ ಬೆಟ್ಟ| ಕಾಲ್ನಡಿಗೆ ಪಾದಯಾತ್ರಿಗಳಿಗೆ ಸೌಲಭ್ಯ ಕಲ್ಪಿಸಿ: ಡಿಸಿಎಂ ಡಿಕೆಶಿ ಸೂಚನೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…

54 mins ago