ಬಾಗಲಕೋಟೆ: ರಾಜ್ಯ ರಾಜಕೀಯದಲ್ಲಿ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ವಾಲ್ಮೀಕಿ ನಿಗಮ ಹಗರಣದ ತನಿಖೆ ಚುರುಕಾಗಿರುವ ನಡುವೆಯೇ ಇದೀಗ ಬಾಗಲಕೋಟೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಬ್ಯಾಂಕ್ ಖಾತೆಯಲ್ಲಿದ್ದ 2.47 ಕೋಟಿಗೂ ಹೆಚ್ಚಿನ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ಅಧಿಕಾರಿಗಳ ಗಮನಕ್ಕೆ ಬಾರದೇ ಈ ಹಣದ ವರ್ಗಾವಣೆ ಆಗಿದೆ ಎಂದು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅಕ್ರಮವಾಗಿ ಹಣ ವರ್ಗಾವಣೆಯಾಗಿರುವ ಮಾಹಿತಿ ಬರುತ್ತಲೇ ಬಾಗಲಕೋಟೆಯ ಐಡಿಬಿಐ ಬ್ಯಾಂಕ್ ಮ್ಯಾನೇಜರ್ ಮತ್ತು ಸಿಬ್ಬಂದಿ ವಿರುದ್ಧ ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಗೋಪಾಲ ಹಿತ್ತಲಮನಿ ಅವರು ಜುಲೈ.11ರಂದು ದೂರು ದಾಖಲಿಸಿದ್ದು, ತನಿಖೆ ಆರಂಭವಾಗಿದೆ.
ಕಳೆದ ಮೂರು ವರ್ಷಗಳಲ್ಲಿ ಅಕ್ರಮವಾಗಿ ಹಣ ವರ್ಗಾವಣೆಯಾಗುತ್ತಿದ್ದರೂ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಈ ಕುರಿತು ಯಾವುದೇ ಪರಿಶೀಲನೆ ನಡೆಸದೇ ಹೋಗಿದ್ದು ಅಚ್ಚರಿಕೆ ಕಾರಣವಾಗಿದೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು, ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆಯ 2.47 ಕೋಟಿ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವ ಕುರಿತು ಈಗಾಗಲೇ ನಮ್ಮ ಇಲಾಖೆಯಿಂದ ದೂರು ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿ ಸಂಗ್ರಹಿಸಲು ತಿಳಿಸಲಾಗಿದೆ. ಹಗರಣದಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…