ರಾಜ್ಯ

ಅಕ್ರಮ ಆಸ್ತಿಗಳಿಕೆ: ಲೋಕಾಯುಕ್ತದಿಂದ ರಾಜ್ಯಾದ್ಯಂತ ದಾಳಿ

ಬೆಂಗಳೂರು: ರಾಜ್ಯದ ಹಲವು ಇಲಾಖೆಗಳಲ್ಲಿ ಅಧಿಕಾರಿಗಳು ತಮ್ಮ ಆದಾಯಕ್ಕೂ ಮೀರಿ ಅಧಿಕ ಆಸ್ತಿಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳ ನಿವಾಸದ ಮೇಲೆ ರಾಜ್ಯದ ಹಲವು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಇಂದು(ಡಿ.10) ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಬೆಸ್ಕಾಂ, ಆರೋಗ್ಯ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಮುಖ್ಯವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಯಚೂರು, ಗದಗ, ಕಲಬುರಗಿ, ಕೊಪ್ಪಳ ಹಾಗೂ ಚಿತ್ರದುರ್ಗದ ಅಧಿಕಾರಿಗಳ ನಿವಾಸದ ಮೇಲೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನಲ್ಲಿ ಈಸ್ಟ್‌ ಸರ್ಕಲ್‌ ಬೆಸ್ಕಾಂನ ಸೂಪರಿಂಟೆಂಡೆಂಟ್‌ ಇಂಜಿನಿಯರ್‌ ಲೋಕೇಶ್‌ ಬಾಬು, ಬಿಬಿಎಂಪಿ ವಾರ್ಡ್‌ ಸಂಖ್ಯೆ 197ರ ಕಂದಾಯ ನಿರೀಕ್ಷಕ ಸುರೇಶ್‌ ಬಾಬು ಹಾಗೂ ಯಲಹಂಕ ವಲಯದ ತೆರಿಗೆ ನಿರೀಕ್ಷಕ ಕೃಷ್ಣಪ್ಪ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಎಂ.ಸಿ.ಸುನೀಲ್‌ ಕುಮಾರ್‌ ಅವರ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಇನ್ನು ಕಲಬುರಗಿ ಮಹಾನಗರಪಾಲಿಕೆಯ ಉಪ ಆಯುಕ್ತ ಆರ್.ಪಿ.ಜಾಧವ ನಿವಾಸ, ಫಾರ್ಮ್‌ ಹೌಸ್‌ ಹಾಗೂ ಕೊಪ್ಪಳದ ಅಬಕಾರಿ ನಿರೀಕ್ಷಕ ರಮೇಶ್‌ ಅಂಗಡಿ ನಿವಾಸದ ಮೇಲೂ ದಾಳಿ ಮಾಡಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

 

ಅರ್ಚನ ಎಸ್‌ ಎಸ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

14 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

14 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

15 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

16 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

17 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

17 hours ago