ಬೆಂಗಳೂರು: ರಾಜ್ಯದ ಹಲವು ಇಲಾಖೆಗಳಲ್ಲಿ ಅಧಿಕಾರಿಗಳು ತಮ್ಮ ಆದಾಯಕ್ಕೂ ಮೀರಿ ಅಧಿಕ ಆಸ್ತಿಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳ ನಿವಾಸದ ಮೇಲೆ ರಾಜ್ಯದ ಹಲವು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತು ಇಂದು(ಡಿ.10) ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಬೆಸ್ಕಾಂ, ಆರೋಗ್ಯ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ಮುಖ್ಯವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಯಚೂರು, ಗದಗ, ಕಲಬುರಗಿ, ಕೊಪ್ಪಳ ಹಾಗೂ ಚಿತ್ರದುರ್ಗದ ಅಧಿಕಾರಿಗಳ ನಿವಾಸದ ಮೇಲೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನಲ್ಲಿ ಈಸ್ಟ್ ಸರ್ಕಲ್ ಬೆಸ್ಕಾಂನ ಸೂಪರಿಂಟೆಂಡೆಂಟ್ ಇಂಜಿನಿಯರ್ ಲೋಕೇಶ್ ಬಾಬು, ಬಿಬಿಎಂಪಿ ವಾರ್ಡ್ ಸಂಖ್ಯೆ 197ರ ಕಂದಾಯ ನಿರೀಕ್ಷಕ ಸುರೇಶ್ ಬಾಬು ಹಾಗೂ ಯಲಹಂಕ ವಲಯದ ತೆರಿಗೆ ನಿರೀಕ್ಷಕ ಕೃಷ್ಣಪ್ಪ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಎಂ.ಸಿ.ಸುನೀಲ್ ಕುಮಾರ್ ಅವರ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಇನ್ನು ಕಲಬುರಗಿ ಮಹಾನಗರಪಾಲಿಕೆಯ ಉಪ ಆಯುಕ್ತ ಆರ್.ಪಿ.ಜಾಧವ ನಿವಾಸ, ಫಾರ್ಮ್ ಹೌಸ್ ಹಾಗೂ ಕೊಪ್ಪಳದ ಅಬಕಾರಿ ನಿರೀಕ್ಷಕ ರಮೇಶ್ ಅಂಗಡಿ ನಿವಾಸದ ಮೇಲೂ ದಾಳಿ ಮಾಡಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…