ರಾಜ್ಯ

ಅಕ್ರಮ ಆಸ್ತಿ‌ ಗಳಿಕೆ ಕೇಸ್: ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಬಿಗ್‌ ರಿಲೀಫ್:‌ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆಯ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ ಮೂಲಕ ಡಿಸಿಎಂ ಡಿಕೆ ಶಿವಕುಮಾರ್‌ಗೆ ಬಿಗ್‌ ರಿಲೀಫ್ ಸಿಕ್ಕಾಂತಾಗಿದೆ.

ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಕುರಿತು ಹೈಕೋರ್ಟ್‌ ಇಂದು ವಿಚಾರಣೆ ನಡೆಸಿತು.

ಡಿಸಿಎಂ ಡಿಕೆ ಶಿವಕುಮಾರ್‌ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಯತ್ನಾಳ್‌ ಸಲ್ಲಿಸಿರುವ ಮೇಲ್ಮನವಿ ಕುರಿತು ನ್ಯಾಯಪೀಠ ವಿಚಾರಣೆ ಪೂರ್ಣಗೊಳಿಸಿ ಅರ್ಜಿಯನ್ನು ವಜಾಗೊಳಿಸಿತು.

ಸಿಬಿಐ ಹಾಗೂ ರಾಜ್ಯದ ನಡುವಿನ ವಿವಾದವನ್ನು ಸುಪ್ರೀಂಕೋರ್ಟ್‌ನಲ್ಲಿಯೇ ಬಗೆಹರಿಸಿಕೊಳ್ಳುವುದು ಸೂಕ್ತ. ಸಿಬಿಐ ಬದಲಾಗಿ ಲೋಕಾಯುಕ್ತದಲ್ಲಿ ತನಿಖೆ ಮುಂದುವರೆಸಬಹುದು ಎಂದು ವಿಭಾಗೀಯ ಪೀಠ ಹೇಳಿದೆ. ಈ ಮೂಲಕ ಕೇಸ್‌ ಅರ್ಜಿಯನ್ನು ವಜಾಗೊಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮ.ಬೆಟ್ಟ | ಅಪರಿಚಿತ ವಾಹನ ಡಿಕ್ಕಿ : ಜಿಂಕೆ ಸಾವು

ಹನೂರು : ಮಹದೇಶ್ವರ ಬೆಟ್ಟ ರಸ್ತೆಯಲ್ಲಿ ನಡೆದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಜಿಂಕೆಯೊಂದು ರಸ್ತೆಯಲ್ಲಿಯೇ ಮೃತಪಟ್ಟಿರುವ ಘಟನೆ ಭಾನುವಾರ…

11 mins ago

ಹನೂರು | ಚಿನ್ನ ನಿಕ್ಷೇಪದ ಶಂಕೆ ; ಗುಡ್ಡವನ್ನೇ ಅಗೆದ ಕಿಡಿಗೇಡಿಗಳು

ಹನೂರು : ತಾಲ್ಲೂಕಿನ ದೊಡ್ಡಾಲತ್ತೂರು, ಅಜ್ಜೀಪುರ ಸುತ್ತಮುತ್ತಲೂ ಜಿಎಸ್‌ಐ ಅಧಿಕಾರಿಗಳು ಚಿನ್ನದ ನಿಕ್ಷೇಪ ಇರುವ ಬಗ್ಗೆ ಅಧ್ಯಯನಕ್ಕೆ ಮುಂದಾಗುತ್ತಿದ್ದಂತೆ ಚಿನ್ನದಾಸೆಗಾಗಿ…

23 mins ago

ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ ಆರಂಭ : ವರ್ಣರಂಜಿತ ಚಾಲನೆ

ಮೈಸೂರು : ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಸಂಭ್ರಮಕ್ಕೆ ಮುನ್ನುಡಿಯಾಗಿ ಅರಮನೆ ಫಲಪುಷ್ಪ ಪ್ರದರ್ಶನ ಭಾನುವಾರದಿಂದ ವರ್ಣರಂಜಿತವಾಗಿ ಆರಂಭಗೊಂಡಿದೆ. ಮೈಸೂರು…

27 mins ago

ಜೋಹಾನ್ಸ್‌ಬರ್ಗ್‌ನಲ್ಲಿ ಗುಂಡಿನ ದಾಳಿ : 10 ಮಂದಿ ಸಾವು, 10 ಜನರಿಗೆ ಗಾಯ

ಜೋಹಾನ್ಸ್‌ಬರ್ಗ್ : ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ ಪಶ್ಚಿಮದಲ್ಲಿರುವ ಬೆಕರ್ಸ್‌ಡಾಲ್ ಪಟ್ಟಣದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಈ ಸಾಮೂಹಿಕ ಗುಂಡಿನ…

31 mins ago

ಎಚ್.ಡಿ.ಕೋಟೆ | ಪಟ್ಟಣಕ್ಕೆ ಬಂದ ಚಿರತೆ : ಮೇಕೆ ಬಲಿ ; ಜನರಲ್ಲಿ ಆತಂಕ

ಎಚ್.ಡಿ.ಕೋಟೆ : ಹುಲಿ ದಾಳಿಯಿಂದ ತತ್ತರಿಸಿರುವ ತಾಲ್ಲೂಕಿನ ಜನತೆಗೆ ಇದೀಗ ಚಿರತೆ ದಾಳಿಯು ನಿದ್ದೆಗೆಡಿಸಿದೆ. ಪಟ್ಟಣದ ವಾರ್ಡ್‌ ನಂಬರ್‌ 21ರ…

44 mins ago

ಗಂಗವಾಡಿ ಬಳಿ ಚಿರತೆ ದಾಳಿ : ಮೂರು ಕರು ಸಾವು

ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ…

2 hours ago