Criminal in handcuffs
ಬೆಂಗಳೂರು: ದೇಶದೊಳಗೆ ಅಕ್ರಮವಾಗಿ ನುಸುಳಿ ನಗರದಲ್ಲಿ ವಾಸ ಮಾಡುತಿದ್ದ ಬಾಂಗ್ಲಾದೇಶದ 25 ಪ್ರಜೆಗಳನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ.
ನಗರದಲ್ಲಿ ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ನುಸುಳಿ ವಾಸವಿರುವ ಬಗ್ಗೆ ಮಾಹಿತಿ ಬಂದಿತ್ತು. ಈ ಬಗ್ಗೆ ತನಿಖೆ ಆರಂಭಿಸಿ, ವಿಶೇಷ ಕಾರ್ಯಚರಣೆ ನಡೆಸಿ ಬಾಂಗ್ಲಾ ಪ್ರಜೆಗಳನ್ನ ಪತ್ತೆ ಹಚ್ಚಲಾಗಿದೆ ಎಂದು ಸಿಸಿಬಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ನಗರದ ವಿವಿಧೆಡೆ ತಾತ್ಕಾಲಿಕ್ ಶೆಡ್ಗಳಲ್ಲಿ ಉಳಿದುಕೊಂಡಿದ್ದ ಬಾಂಗ್ಲಾದೇಶದ ೨೫ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ. ಸಿಸಿಬಿ ತಂಡ ರಾಮಮೂರ್ತಿನಗರ, ಮಾರತ್ತಹಳ್ಳಿ, ಬೆಳ್ಳಂದೂರು, ಬಂಡೇಪಾಳ್ಯ, ವರ್ತೂರು ಹಾಗೂ ಹೆಬ್ಬಗೋಡಿ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿತ್ತು ಎಂದು ಹೇಳಿದರು.
ವಶಕ್ಕೆ ಪಡೆದವರಲ್ಲಿ ಇಬ್ಬರು ಅಪರಾಧ ಹಿನ್ನೆಲೆಯುಳ್ಳವರು. ಜೈಲಿಗೇ ಹೋಗಿ ಜಾಮೀನಿನ ಮೇಲೆ ಹೊರಗೆ ಇದ್ದರು. ಇದರಲ್ಲಿ ಐವರು ಪ್ರಜೆಗಳು ತಲೆಮರೆಸಿಕೊಂಡಿದ್ದಾರೆ ಎಂದರು.
ಮಾವನ ಕಳ್ಳ ಸಾಗಾಣಿಕೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಲಾಗಿದೆ. ಬಾಂಗ್ಲಾ ಪ್ರಜೆಗಳನ್ನು ಅಕ್ರಮವಾಗಿ ನಗರಕ್ಕೆ ಕರೆಸಿದ್ದು, ಕಟ್ಟಡ ನಿರ್ಮಾಣ ಹಾಗೂ ಇತರೆ ಕಡೆ ಪ್ರಜೆಗಳು ಕೆಲಸ ಮಾಡುತ್ತಿದ್ದರು. ಇನ್ನು ಹಲವರು ನಗರದಲ್ಲಿ ನೆಲೆಸಿರುವ ಮಾಹಿತಿ ಇದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…
ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…
ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…
ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…
ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…