Criminal in handcuffs
ಬೆಂಗಳೂರು: ದೇಶದೊಳಗೆ ಅಕ್ರಮವಾಗಿ ನುಸುಳಿ ನಗರದಲ್ಲಿ ವಾಸ ಮಾಡುತಿದ್ದ ಬಾಂಗ್ಲಾದೇಶದ 25 ಪ್ರಜೆಗಳನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ.
ನಗರದಲ್ಲಿ ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ನುಸುಳಿ ವಾಸವಿರುವ ಬಗ್ಗೆ ಮಾಹಿತಿ ಬಂದಿತ್ತು. ಈ ಬಗ್ಗೆ ತನಿಖೆ ಆರಂಭಿಸಿ, ವಿಶೇಷ ಕಾರ್ಯಚರಣೆ ನಡೆಸಿ ಬಾಂಗ್ಲಾ ಪ್ರಜೆಗಳನ್ನ ಪತ್ತೆ ಹಚ್ಚಲಾಗಿದೆ ಎಂದು ಸಿಸಿಬಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ನಗರದ ವಿವಿಧೆಡೆ ತಾತ್ಕಾಲಿಕ್ ಶೆಡ್ಗಳಲ್ಲಿ ಉಳಿದುಕೊಂಡಿದ್ದ ಬಾಂಗ್ಲಾದೇಶದ ೨೫ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ. ಸಿಸಿಬಿ ತಂಡ ರಾಮಮೂರ್ತಿನಗರ, ಮಾರತ್ತಹಳ್ಳಿ, ಬೆಳ್ಳಂದೂರು, ಬಂಡೇಪಾಳ್ಯ, ವರ್ತೂರು ಹಾಗೂ ಹೆಬ್ಬಗೋಡಿ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿತ್ತು ಎಂದು ಹೇಳಿದರು.
ವಶಕ್ಕೆ ಪಡೆದವರಲ್ಲಿ ಇಬ್ಬರು ಅಪರಾಧ ಹಿನ್ನೆಲೆಯುಳ್ಳವರು. ಜೈಲಿಗೇ ಹೋಗಿ ಜಾಮೀನಿನ ಮೇಲೆ ಹೊರಗೆ ಇದ್ದರು. ಇದರಲ್ಲಿ ಐವರು ಪ್ರಜೆಗಳು ತಲೆಮರೆಸಿಕೊಂಡಿದ್ದಾರೆ ಎಂದರು.
ಮಾವನ ಕಳ್ಳ ಸಾಗಾಣಿಕೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಲಾಗಿದೆ. ಬಾಂಗ್ಲಾ ಪ್ರಜೆಗಳನ್ನು ಅಕ್ರಮವಾಗಿ ನಗರಕ್ಕೆ ಕರೆಸಿದ್ದು, ಕಟ್ಟಡ ನಿರ್ಮಾಣ ಹಾಗೂ ಇತರೆ ಕಡೆ ಪ್ರಜೆಗಳು ಕೆಲಸ ಮಾಡುತ್ತಿದ್ದರು. ಇನ್ನು ಹಲವರು ನಗರದಲ್ಲಿ ನೆಲೆಸಿರುವ ಮಾಹಿತಿ ಇದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…
ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…
ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…
ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…
ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…
ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…