Criminal in handcuffs
ಬೆಂಗಳೂರು: ದೇಶದೊಳಗೆ ಅಕ್ರಮವಾಗಿ ನುಸುಳಿ ನಗರದಲ್ಲಿ ವಾಸ ಮಾಡುತಿದ್ದ ಬಾಂಗ್ಲಾದೇಶದ 25 ಪ್ರಜೆಗಳನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ.
ನಗರದಲ್ಲಿ ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ನುಸುಳಿ ವಾಸವಿರುವ ಬಗ್ಗೆ ಮಾಹಿತಿ ಬಂದಿತ್ತು. ಈ ಬಗ್ಗೆ ತನಿಖೆ ಆರಂಭಿಸಿ, ವಿಶೇಷ ಕಾರ್ಯಚರಣೆ ನಡೆಸಿ ಬಾಂಗ್ಲಾ ಪ್ರಜೆಗಳನ್ನ ಪತ್ತೆ ಹಚ್ಚಲಾಗಿದೆ ಎಂದು ಸಿಸಿಬಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ನಗರದ ವಿವಿಧೆಡೆ ತಾತ್ಕಾಲಿಕ್ ಶೆಡ್ಗಳಲ್ಲಿ ಉಳಿದುಕೊಂಡಿದ್ದ ಬಾಂಗ್ಲಾದೇಶದ ೨೫ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ. ಸಿಸಿಬಿ ತಂಡ ರಾಮಮೂರ್ತಿನಗರ, ಮಾರತ್ತಹಳ್ಳಿ, ಬೆಳ್ಳಂದೂರು, ಬಂಡೇಪಾಳ್ಯ, ವರ್ತೂರು ಹಾಗೂ ಹೆಬ್ಬಗೋಡಿ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿತ್ತು ಎಂದು ಹೇಳಿದರು.
ವಶಕ್ಕೆ ಪಡೆದವರಲ್ಲಿ ಇಬ್ಬರು ಅಪರಾಧ ಹಿನ್ನೆಲೆಯುಳ್ಳವರು. ಜೈಲಿಗೇ ಹೋಗಿ ಜಾಮೀನಿನ ಮೇಲೆ ಹೊರಗೆ ಇದ್ದರು. ಇದರಲ್ಲಿ ಐವರು ಪ್ರಜೆಗಳು ತಲೆಮರೆಸಿಕೊಂಡಿದ್ದಾರೆ ಎಂದರು.
ಮಾವನ ಕಳ್ಳ ಸಾಗಾಣಿಕೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಲಾಗಿದೆ. ಬಾಂಗ್ಲಾ ಪ್ರಜೆಗಳನ್ನು ಅಕ್ರಮವಾಗಿ ನಗರಕ್ಕೆ ಕರೆಸಿದ್ದು, ಕಟ್ಟಡ ನಿರ್ಮಾಣ ಹಾಗೂ ಇತರೆ ಕಡೆ ಪ್ರಜೆಗಳು ಕೆಲಸ ಮಾಡುತ್ತಿದ್ದರು. ಇನ್ನು ಹಲವರು ನಗರದಲ್ಲಿ ನೆಲೆಸಿರುವ ಮಾಹಿತಿ ಇದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…