Criminal in handcuffs
ಬೆಂಗಳೂರು: ದೇಶದೊಳಗೆ ಅಕ್ರಮವಾಗಿ ನುಸುಳಿ ನಗರದಲ್ಲಿ ವಾಸ ಮಾಡುತಿದ್ದ ಬಾಂಗ್ಲಾದೇಶದ 25 ಪ್ರಜೆಗಳನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ.
ನಗರದಲ್ಲಿ ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ನುಸುಳಿ ವಾಸವಿರುವ ಬಗ್ಗೆ ಮಾಹಿತಿ ಬಂದಿತ್ತು. ಈ ಬಗ್ಗೆ ತನಿಖೆ ಆರಂಭಿಸಿ, ವಿಶೇಷ ಕಾರ್ಯಚರಣೆ ನಡೆಸಿ ಬಾಂಗ್ಲಾ ಪ್ರಜೆಗಳನ್ನ ಪತ್ತೆ ಹಚ್ಚಲಾಗಿದೆ ಎಂದು ಸಿಸಿಬಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ನಗರದ ವಿವಿಧೆಡೆ ತಾತ್ಕಾಲಿಕ್ ಶೆಡ್ಗಳಲ್ಲಿ ಉಳಿದುಕೊಂಡಿದ್ದ ಬಾಂಗ್ಲಾದೇಶದ ೨೫ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ. ಸಿಸಿಬಿ ತಂಡ ರಾಮಮೂರ್ತಿನಗರ, ಮಾರತ್ತಹಳ್ಳಿ, ಬೆಳ್ಳಂದೂರು, ಬಂಡೇಪಾಳ್ಯ, ವರ್ತೂರು ಹಾಗೂ ಹೆಬ್ಬಗೋಡಿ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿತ್ತು ಎಂದು ಹೇಳಿದರು.
ವಶಕ್ಕೆ ಪಡೆದವರಲ್ಲಿ ಇಬ್ಬರು ಅಪರಾಧ ಹಿನ್ನೆಲೆಯುಳ್ಳವರು. ಜೈಲಿಗೇ ಹೋಗಿ ಜಾಮೀನಿನ ಮೇಲೆ ಹೊರಗೆ ಇದ್ದರು. ಇದರಲ್ಲಿ ಐವರು ಪ್ರಜೆಗಳು ತಲೆಮರೆಸಿಕೊಂಡಿದ್ದಾರೆ ಎಂದರು.
ಮಾವನ ಕಳ್ಳ ಸಾಗಾಣಿಕೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಲಾಗಿದೆ. ಬಾಂಗ್ಲಾ ಪ್ರಜೆಗಳನ್ನು ಅಕ್ರಮವಾಗಿ ನಗರಕ್ಕೆ ಕರೆಸಿದ್ದು, ಕಟ್ಟಡ ನಿರ್ಮಾಣ ಹಾಗೂ ಇತರೆ ಕಡೆ ಪ್ರಜೆಗಳು ಕೆಲಸ ಮಾಡುತ್ತಿದ್ದರು. ಇನ್ನು ಹಲವರು ನಗರದಲ್ಲಿ ನೆಲೆಸಿರುವ ಮಾಹಿತಿ ಇದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…