ಚನ್ನಪಟ್ಟಣ: ನನ್ನ ಮತ್ತು ನಿಮ್ಮ ಸಂಬಂಧ ಭಕ್ತನಿಗೂ ಭಗವಂತನಿಗೂ ಇರುವ ಸಂಬಂಧ. ನಿಮ್ಮನ್ನು ಬಿಟ್ಟು ಹೋಗುವ ವ್ಯಕ್ತಿ ನಾನಲ್ಲ. ಬದಲಿಗೆ ಯಾವಾಗಲೂ ಜೊತೆಗಿರುತ್ತೇನೆ ಎಂದು ಚನ್ನಪಟ್ಟಣ ಕ್ಷೇತ್ರದ ಜನತೆಗೆ ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು.
ಚನ್ನಪಟ್ಟಣ ತಾಲೂಕಿನ ಬೇವೂರಿನ ಶ್ರೀ ಸಿದ್ದರಾಮೇಶ್ವರ ವಿದ್ಯಾಸಂಸ್ಥೆಯಲ್ಲಿ ಇಂದು(ಜೂ.26) ಹಮ್ಮಿಕೊಂಡಿದ್ದ “ಬಾಗಿಲಿಗೆ ಬಂತು ಸರಕಾರ ಸೇವೆಗೆ ಇರಲಿ ಸಹಕಾರ” ಬೃಹತ್ ಜನಸ್ಪಂದನ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಮಾಜಿ ಶಾಸಕರು ಯಾವುದೋ ಲೆಕ್ಕಚಾರದ ಮೇಲೆ ನಿಮ್ಮ ಹೃದಯ ಗೆದ್ದಿದ್ದರು. ಈಗ ನಾನು ನಿಮ್ಮ ಹೃದಯ ಗೆಲ್ಲಲು ಬಂದಿದ್ದೇನೆ. ಈ ಬಾರಿ ಚನ್ನಪಟ್ಟಣದಲ್ಲಿ ನಿಮಗೆ ಬೇಕಾದವರು ಶಾಸಕರಾಗಿ ಆಯ್ಕೆಯಾಗುತ್ತಾರೆ. ನಮ್ಮ ಕೈ ಬಲಪಡಿಸಿ ಎಂದು ಮನವಿ ಮಾಡಿದರು.
ನಾವು ಕನಕಪುರದಲ್ಲೂ ಇದೇ ರೀತಿಯ ಕಾರ್ಯಕ್ರಮ ಮಾಡಿ ಜನರ ಸಮಸ್ಯೆ ಕೇಳಿ ಪರಿಹರಿಸಿದ್ದೇವೆ. ಅದನ್ನೇ ಇಲ್ಲಿ ಮಾಡುತ್ತಿದ್ದೇವೆ. ಮಾಜಿ ಶಾಸಕರಿಗೆ ಇಂತಹ ಕಾರ್ಯಕ್ರಮಗಳಲ್ಲಿ ಆಸಕ್ತಿ ಇರಲಿಲ್ಲ ಎಂದರು.
ಕ್ಷೇತ್ರದ ಅಭಿವೃದ್ಧಿಗಾಗಿ ಸುಮಾರು ರೂ.150 ಕೋಟಿಯಿಂದ ರೂ.200 ಕೋಟಿ ವಿಶೇಷ ಅನುದಾನ ತರುವೆ. ನಿಮಗೆ ಅಭಿವೃದ್ಧಿಯ ಹಸಿವಿನ ಜೊತೆಗೆ ನೋವು ಸಹ ಇದೆ. ಅದನ್ನು ನೀಗಿಸುವ ಕೆಲಸವನ್ನು ಮಾಡುತ್ತೇನೆ ಎಂದು ಹೇಳಿದರು.
ಸಭೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಈ ವೇಳೆ ವಿದ್ಯಾರ್ಥಿ ಗುಂಪೊಂದು ಗ್ರಾಮಕ್ಕೆ ಬಸ್ ವ್ಯವಸ್ಥೆ ಸರಿಯಾಗಿಲ್ಲ ಎಂದು ಅಹವಾಲು ಸಲ್ಲಿಸಿದರು. ಅದಕ್ಕೆ ಪ್ರತಿಕ್ರಿಯಿಸಿದರ ಡಿಸಿಎಂ, ಸೋಮವಾರದಿಂದ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸುವಂತೆ ಕೆಎಸ್ಆರ್ಟಿದಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಸೂಚಿಸಿದರು.
ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…
ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…
ಟೆಹ್ರಾನ್ : ಇರಾನ್ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…