ರಾಜ್ಯ

ನಿಮ್ಮನ್ನು ಬಿಟ್ಟು ಹೋಗುವ ವ್ಯಕ್ತಿ ನಾನಲ್ಲ, ಯಾವಾಗಲೂ ಜೊತೆಗಿರುತ್ತೇನೆ: ಡಿಕೆ ಶಿವಕುಮಾರ್‌

ಚನ್ನಪಟ್ಟಣ: ನನ್ನ ಮತ್ತು ನಿಮ್ಮ ಸಂಬಂಧ ಭಕ್ತನಿಗೂ ಭಗವಂತನಿಗೂ ಇರುವ ಸಂಬಂಧ. ನಿಮ್ಮನ್ನು ಬಿಟ್ಟು ಹೋಗುವ ವ್ಯಕ್ತಿ ನಾನಲ್ಲ. ಬದಲಿಗೆ ಯಾವಾಗಲೂ ಜೊತೆಗಿರುತ್ತೇನೆ ಎಂದು ಚನ್ನಪಟ್ಟಣ ಕ್ಷೇತ್ರದ ಜನತೆಗೆ ಡಿಸಿಎಂ ಡಿಕೆ ಶಿವಕುಮಾರ್‌ ಭರವಸೆ ನೀಡಿದರು.

ಚನ್ನಪಟ್ಟಣ ತಾಲೂಕಿನ ಬೇವೂರಿನ ಶ್ರೀ ಸಿದ್ದರಾಮೇಶ್ವರ ವಿದ್ಯಾಸಂಸ್ಥೆಯಲ್ಲಿ ಇಂದು(ಜೂ.26) ಹಮ್ಮಿಕೊಂಡಿದ್ದ “ಬಾಗಿಲಿಗೆ ಬಂತು ಸರಕಾರ ಸೇವೆಗೆ ಇರಲಿ ಸಹಕಾರ” ಬೃಹತ್‌ ಜನಸ್ಪಂದನ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಮಾಜಿ ಶಾಸಕರು ಯಾವುದೋ ಲೆಕ್ಕಚಾರದ ಮೇಲೆ ನಿಮ್ಮ ಹೃದಯ ಗೆದ್ದಿದ್ದರು. ಈಗ ನಾನು ನಿಮ್ಮ ಹೃದಯ ಗೆಲ್ಲಲು ಬಂದಿದ್ದೇನೆ. ಈ ಬಾರಿ ಚನ್ನಪಟ್ಟಣದಲ್ಲಿ ನಿಮಗೆ ಬೇಕಾದವರು ಶಾಸಕರಾಗಿ ಆಯ್ಕೆಯಾಗುತ್ತಾರೆ. ನಮ್ಮ ಕೈ ಬಲಪಡಿಸಿ ಎಂದು ಮನವಿ ಮಾಡಿದರು.

ನಾವು ಕನಕಪುರದಲ್ಲೂ ಇದೇ ರೀತಿಯ ಕಾರ್ಯಕ್ರಮ ಮಾಡಿ ಜನರ ಸಮಸ್ಯೆ ಕೇಳಿ ಪರಿಹರಿಸಿದ್ದೇವೆ. ಅದನ್ನೇ ಇಲ್ಲಿ ಮಾಡುತ್ತಿದ್ದೇವೆ. ಮಾಜಿ ಶಾಸಕರಿಗೆ ಇಂತಹ ಕಾರ್ಯಕ್ರಮಗಳಲ್ಲಿ ಆಸಕ್ತಿ ಇರಲಿಲ್ಲ ಎಂದರು.

ಕ್ಷೇತ್ರದ ಅಭಿವೃದ್ಧಿಗಾಗಿ ಸುಮಾರು ರೂ.150 ಕೋಟಿಯಿಂದ ರೂ.200 ಕೋಟಿ ವಿಶೇಷ ಅನುದಾನ ತರುವೆ. ನಿಮಗೆ ಅಭಿವೃದ್ಧಿಯ ಹಸಿವಿನ ಜೊತೆಗೆ ನೋವು ಸಹ ಇದೆ. ಅದನ್ನು ನೀಗಿಸುವ ಕೆಲಸವನ್ನು ಮಾಡುತ್ತೇನೆ ಎಂದು ಹೇಳಿದರು.

ಸಭೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಈ ವೇಳೆ ವಿದ್ಯಾರ್ಥಿ ಗುಂಪೊಂದು ಗ್ರಾಮಕ್ಕೆ ಬಸ್‌ ವ್ಯವಸ್ಥೆ ಸರಿಯಾಗಿಲ್ಲ ಎಂದು ಅಹವಾಲು ಸಲ್ಲಿಸಿದರು. ಅದಕ್ಕೆ ಪ್ರತಿಕ್ರಿಯಿಸಿದರ ಡಿಸಿಎಂ, ಸೋಮವಾರದಿಂದ ಸೂಕ್ತ ಬಸ್‌ ವ್ಯವಸ್ಥೆ ಕಲ್ಪಿಸುವಂತೆ ಕೆಎಸ್‌ಆರ್‌ಟಿದಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಸೂಚಿಸಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಕ್ಕಿ ಬೆಲೆ ಹೆಚ್ಚಳ: ಗ್ರಾಹಕರ ಜೇಬಿಗೆ ಹೊರೆ

ಚನ್ನೇಶ ಬಿ.ಇದರಮನಿ ಬರ ಪರಿಸ್ಥಿತಿಯಿಂದ ಅಕ್ಕಿ ಬೆಲೆ ಇನ್ನಷ್ಟು ಏರಿಕೆ ಸಾಧ್ಯತೆ ಪ್ರತಿ ಕೆಜಿಗೆ ೬ ರಿಂದ ೧೦ ರೂ.ಗಳಷ್ಟು…

3 mins ago

ಧ್ರುವರ ಹೆಸರಿಗೆ ಹೊಳಪು ನೀಡುವ ಅಭಿಮಾನಿ ಬಳಗ

ಎಸ್.ಎಸ್.ಭಟ್ಟ ನಾಳೆ ಉದ್ಯೋಗ ಮೇಳ, ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಆಯೋಜನೆ  ನಂಜನಗೂಡು: ಮಾಜಿ ಸಂಸದರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ…

8 mins ago

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

24 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

24 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

24 hours ago