ರಾಜ್ಯ

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ.

ಕರ್ನಾಟಕ ಸಾರಿಗೆ ಇಲಾಖೆ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳ ಅಳವಡಿಕೆ ಕುರಿತು ಸ್ಪಷ್ಟನೆ ನೀಡಿದೆ. ಇತ್ತೀಚೆಗೆ ಕೆಲವು ಮಾಧ್ಯಮಗಳಲ್ಲಿ 2019ರ ಏಪ್ರಿಲ್ 1ರ ಮುಂಚೆ ನೋಂದಾಯಿಸಲ್ಪಟ್ಟ ವಾಹನಗಳಿಗೆ HSRP ಕಡ್ಡಾಯವಲ್ಲ ಎಂಬ ಸುದ್ದಿ ಪ್ರಸಾರವಾಗಿದ್ದು, ಅದು ಸತ್ಯಕ್ಕೆ ದೂರವಾಗಿದೆ ಎಂದು ಇಲಾಖೆ ತಿಳಿಸಿದೆ.

ಸಾರಿಗೆ ಇಲಾಖೆಯ ಸ್ಪಷ್ಟೀಕರಣದಂತೆ, 2019ರ ಏಪ್ರಿಲ್ 1ರ ಮುಂಚೆ ನೋಂದಾಯಿಸಲ್ಪಟ್ಟ ಎಲ್ಲಾ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯವಾಗಿದೆ. ಮಾಧ್ಯಮಗಳಲ್ಲಿ ಹರಿದಿರುವ “ಹಳೆಯ ವಾಹನಗಳಿಗೆ ಕಡ್ಡಾಯವಲ್ಲ” ಎಂಬ ಸುದ್ದಿ ತಪ್ಪಾಗಿದೆ. ಸಾರ್ವಜನಿಕರು ತಮ್ಮ ವಾಹನಗಳಿಗೆ ಶೀಘ್ರವಾಗಿ HSRP ಅಳವಡಿಸಿಕೊಳ್ಳಬೇಕಾಗಿದೆ ಎಂದು ಇಲಾಖೆ ತಿಳಿಸಿದೆ.

ಅತಿ ಸುರಕ್ಷಿತ ನೋಂದಣಿ ಫಲಕಗಳು ಎಂಬುದು ವಾಹನಗಳಿಗೆ ಅಳವಡಿಸುವ ವಿಶೇಷ ರೀತಿಯ ನಂಬರ್ ಪ್ಲೇಟ್. ಇವು ಸಾಮಾನ್ಯ ಫಲಕಗಳಿಗಿಂತ ಹೆಚ್ಚು ಸುರಕ್ಷಿತವಾಗಿದ್ದು, ನಕಲಿ ಫಲಕಗಳನ್ನು ತಡೆಯಲು ಹಾಗೂ ವಾಹನಗಳ ಗುರುತಿನ ಖಚಿತತೆ ಹೆಚ್ಚಿಸಲು ವಿನ್ಯಾಸಗೊಳಿಸಲಾಗಿದೆ.

HSRP ಫಲಕಗಳಲ್ಲಿ ಲೇಸರ್ ಕೋಡ್, ಕ್ರೋಮ್-ಬೇಸ್ ಹೋಲೋಗ್ರಾಮ್, ಶಾಶ್ವತ ಅಳವಡಿಕೆ ವ್ಯವಸ್ಥೆ ಇರುತ್ತದೆ. ಇದರಿಂದ ಫಲಕವನ್ನು ಸುಲಭವಾಗಿ ತೆಗೆದು ಹಾಕಲು ಸಾಧ್ಯವಿಲ್ಲ. ಪ್ರತಿಯೊಂದು ಫಲಕಕ್ಕೂ ವಿಶಿಷ್ಟ ಗುರುತು ಸಂಖ್ಯೆ ಇರುತ್ತದೆ.

HSRP ಅಳವಡಿಕೆ ಮೂಲಕ ರಸ್ತೆ ಸುರಕ್ಷತೆ ಹೆಚ್ಚುವುದು, ವಾಹನ ಕಳ್ಳತನ ತಡೆಯುವುದು, ಹಾಗೂ ಟ್ರಾಫಿಕ್ ನಿಯಂತ್ರಣ ವ್ಯವಸ್ಥೆ ಸುಧಾರಿಸುವುದು ಸರ್ಕಾರದ ಉದ್ದೇಶವಾಗಿದೆ. ಆದ್ದರಿಂದ, ಹೊಸದಾಗಲಿ ಹಳೆಯದಾಗಲಿ ಎಲ್ಲಾ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯವಾಗಿದೆ.

ಆಂದೋಲನ ಡೆಸ್ಕ್

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

5 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

6 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

7 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

7 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

8 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

9 hours ago