ರಾಜ್ಯ

ಕೃಷಿ ಇಲಾಖೆಯ ಸಾವಿರ ಹುದ್ದೆ ಭರ್ತಿಗೆ ಶೀಘ್ರ ಕ್ರಮ : ಸಚಿವ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಇಲಾಖೆಯಲ್ಲಿ 1 ಸಾವಿರ ಖಾಲಿ ಹುದ್ದೆಗಳ ನೇಮಕಾತಿಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದ್ದು, ಸೆಪ್ಟೆಂಬರ್‌ನಲ್ಲಿ ಪರೀಕ್ಷೆ ನಡೆಸಿ 2-3 ತಿಂಗಳ ಒಳಗಾಗಿ ನೇಮಕಾತಿ ಆದೇಶ ನೀಡುವ ಸಾಧ್ಯತೆ ಇದೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಶೇ.70 ರಷ್ಟು ಜನ ಕೃಷಿ ಅವಲಂಬಿತರಾಗಿದ್ದಾರೆ. ಬೇಸಾಯವನ್ನು ಲಾಭದಾಯಕವಾಗಿಸಿದರೆ ಅಷ್ಟು ಜನರ ಬದುಕು ಸುಧಾರಣೆಯಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ ಎಂದರು.

ಇಲಾಖೆಯಲ್ಲಿ ಶೇ.57ರಷ್ಟು ಸಿಬ್ಬಂದಿಗಳ ಕೊರತೆ ಇದೆ. ಅಂದ ಮಾತ್ರಕ್ಕೆ ಯಾವುದೇ ಯೋಜನೆಗಳನ್ನು ನಿಲ್ಲಿಸಿಲ್ಲ. ಜಲಾನಯನ ಯೋಜನೆಯಲ್ಲಿ ಗುರಿ ಮೀರಿದ ಸಾಧನೆ ಮಾಡಿ ಕೇಂದ್ರ ಸರಕಾರದಿಂದ 300 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಪಡೆದುಕೊಳ್ಳಲಾಗಿದೆ. ಕೃಷಿ ಹೊಂಡ ನಿರ್ಮಾಣ ಯೋಜನೆಯನ್ನು 224 ಕ್ಷೇತ್ರಗಳಿಗೂ ವಿಸ್ತರಣೆ ಮಾಡಲಾಗಿದೆ ಎಂದರು.

ಒಂದು ಸಾವಿರ ಹುದ್ದೆಗಳ ನೇಮಕಾತಿಯಾದ ಬಳಿಕ ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ನಿರ್ವಹಣೆಯಾಗಲಿದೆ. ಆವರೆಗೂ ಪ್ರಭಾರ ಜವಾಬ್ದಾರಿಗಳಲ್ಲೇ ಕೃಷಿ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕೆಲಸ ನಿರ್ವಹಿಸಲಿದ್ದಾರೆ ಎಂದರು.

ಕೃಷಿಯಲ್ಲಿ ಕಡಿಮೆ ನೀರಿನ ಬಳಕೆ, ತಂತ್ರಜ್ಞಾನ, ಹೆಚ್ಚಿನ ಇಳುವರಿ- ರೋಗನಿರೋಧಕ ತಳಿ ಸೇರಿದಂತೆ ಹಲವು ಸುಧಾರಣೆ ಕ್ರಮಗಳು ನಿರಂತರವಾಗಿ ನಡೆಯುತ್ತಿದೆ. ಕೃಷಿ ವಿಮಾ ಯೋಜನೆಯ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ರೈತರಿಗೆ ಗುಂಡು ಹೊಡೆಸಿದ್ದ ಬಿಜೆಪಿಗರಿಂದ ಕಾಂಗ್ರೆಸ್ ಪಾಠ ಕಲಿಯಬೇಕಿಲ್ಲ : ಸಚಿವೆ ಹೆಬ್ಬಾಳಕರ್‌

ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ‌.‌ ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…

18 mins ago

ಮೈಸೂರಿನಲ್ಲಿ 300 ಎಕರೆ ಜಮೀನಿನಲ್ಲಿ ಲೇಔಟ್‌ ನಿರ್ಮಾಣ: ಸಚಿವ ಭೈರತಿ ಸುರೇಶ್‌

ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…

58 mins ago

ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಆದರೆ ಈ…

1 hour ago

482 ಎಕರೆ ಅರಣ್ಯ ಭೂಮಿ ಕಬಳಿಕೆ ಯತ್ನ: ಸಿಐಡಿ ತನಿಖೆ ಕೋರಿ ಸಿಎಂಗೆ ಪತ್ರ ಬರೆದ ಈಶ್ವರ್‌ ಖಂಡ್ರೆ

ಬೆಳಗಾವಿ:  532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…

2 hours ago

ಟಾಕ್ಸಿಕ್‌ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌

ರಾಕಿಂಗ್‌ ಸ್ಟಾರ್‌ ಯಶ್‌ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್‌ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…

2 hours ago

ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜಾಗೃತಿ ರಥಯಾತ್ರೆಗೆ ಚಾಲನೆ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…

2 hours ago