ರಾಜ್ಯ

ಕೃಷಿ ಇಲಾಖೆಯ ಸಾವಿರ ಹುದ್ದೆ ಭರ್ತಿಗೆ ಶೀಘ್ರ ಕ್ರಮ : ಸಚಿವ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಇಲಾಖೆಯಲ್ಲಿ 1 ಸಾವಿರ ಖಾಲಿ ಹುದ್ದೆಗಳ ನೇಮಕಾತಿಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದ್ದು, ಸೆಪ್ಟೆಂಬರ್‌ನಲ್ಲಿ ಪರೀಕ್ಷೆ ನಡೆಸಿ 2-3 ತಿಂಗಳ ಒಳಗಾಗಿ ನೇಮಕಾತಿ ಆದೇಶ ನೀಡುವ ಸಾಧ್ಯತೆ ಇದೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಶೇ.70 ರಷ್ಟು ಜನ ಕೃಷಿ ಅವಲಂಬಿತರಾಗಿದ್ದಾರೆ. ಬೇಸಾಯವನ್ನು ಲಾಭದಾಯಕವಾಗಿಸಿದರೆ ಅಷ್ಟು ಜನರ ಬದುಕು ಸುಧಾರಣೆಯಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ ಎಂದರು.

ಇಲಾಖೆಯಲ್ಲಿ ಶೇ.57ರಷ್ಟು ಸಿಬ್ಬಂದಿಗಳ ಕೊರತೆ ಇದೆ. ಅಂದ ಮಾತ್ರಕ್ಕೆ ಯಾವುದೇ ಯೋಜನೆಗಳನ್ನು ನಿಲ್ಲಿಸಿಲ್ಲ. ಜಲಾನಯನ ಯೋಜನೆಯಲ್ಲಿ ಗುರಿ ಮೀರಿದ ಸಾಧನೆ ಮಾಡಿ ಕೇಂದ್ರ ಸರಕಾರದಿಂದ 300 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಪಡೆದುಕೊಳ್ಳಲಾಗಿದೆ. ಕೃಷಿ ಹೊಂಡ ನಿರ್ಮಾಣ ಯೋಜನೆಯನ್ನು 224 ಕ್ಷೇತ್ರಗಳಿಗೂ ವಿಸ್ತರಣೆ ಮಾಡಲಾಗಿದೆ ಎಂದರು.

ಒಂದು ಸಾವಿರ ಹುದ್ದೆಗಳ ನೇಮಕಾತಿಯಾದ ಬಳಿಕ ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ನಿರ್ವಹಣೆಯಾಗಲಿದೆ. ಆವರೆಗೂ ಪ್ರಭಾರ ಜವಾಬ್ದಾರಿಗಳಲ್ಲೇ ಕೃಷಿ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕೆಲಸ ನಿರ್ವಹಿಸಲಿದ್ದಾರೆ ಎಂದರು.

ಕೃಷಿಯಲ್ಲಿ ಕಡಿಮೆ ನೀರಿನ ಬಳಕೆ, ತಂತ್ರಜ್ಞಾನ, ಹೆಚ್ಚಿನ ಇಳುವರಿ- ರೋಗನಿರೋಧಕ ತಳಿ ಸೇರಿದಂತೆ ಹಲವು ಸುಧಾರಣೆ ಕ್ರಮಗಳು ನಿರಂತರವಾಗಿ ನಡೆಯುತ್ತಿದೆ. ಕೃಷಿ ವಿಮಾ ಯೋಜನೆಯ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

2 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

2 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

3 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

4 hours ago

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

6 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

6 hours ago