ರಾಜ್ಯ

ಕೃಷಿ ಇಲಾಖೆಯ ಸಾವಿರ ಹುದ್ದೆ ಭರ್ತಿಗೆ ಶೀಘ್ರ ಕ್ರಮ : ಸಚಿವ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಇಲಾಖೆಯಲ್ಲಿ 1 ಸಾವಿರ ಖಾಲಿ ಹುದ್ದೆಗಳ ನೇಮಕಾತಿಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದ್ದು, ಸೆಪ್ಟೆಂಬರ್‌ನಲ್ಲಿ ಪರೀಕ್ಷೆ ನಡೆಸಿ 2-3 ತಿಂಗಳ ಒಳಗಾಗಿ ನೇಮಕಾತಿ ಆದೇಶ ನೀಡುವ ಸಾಧ್ಯತೆ ಇದೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಶೇ.70 ರಷ್ಟು ಜನ ಕೃಷಿ ಅವಲಂಬಿತರಾಗಿದ್ದಾರೆ. ಬೇಸಾಯವನ್ನು ಲಾಭದಾಯಕವಾಗಿಸಿದರೆ ಅಷ್ಟು ಜನರ ಬದುಕು ಸುಧಾರಣೆಯಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ ಎಂದರು.

ಇಲಾಖೆಯಲ್ಲಿ ಶೇ.57ರಷ್ಟು ಸಿಬ್ಬಂದಿಗಳ ಕೊರತೆ ಇದೆ. ಅಂದ ಮಾತ್ರಕ್ಕೆ ಯಾವುದೇ ಯೋಜನೆಗಳನ್ನು ನಿಲ್ಲಿಸಿಲ್ಲ. ಜಲಾನಯನ ಯೋಜನೆಯಲ್ಲಿ ಗುರಿ ಮೀರಿದ ಸಾಧನೆ ಮಾಡಿ ಕೇಂದ್ರ ಸರಕಾರದಿಂದ 300 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಪಡೆದುಕೊಳ್ಳಲಾಗಿದೆ. ಕೃಷಿ ಹೊಂಡ ನಿರ್ಮಾಣ ಯೋಜನೆಯನ್ನು 224 ಕ್ಷೇತ್ರಗಳಿಗೂ ವಿಸ್ತರಣೆ ಮಾಡಲಾಗಿದೆ ಎಂದರು.

ಒಂದು ಸಾವಿರ ಹುದ್ದೆಗಳ ನೇಮಕಾತಿಯಾದ ಬಳಿಕ ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ನಿರ್ವಹಣೆಯಾಗಲಿದೆ. ಆವರೆಗೂ ಪ್ರಭಾರ ಜವಾಬ್ದಾರಿಗಳಲ್ಲೇ ಕೃಷಿ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕೆಲಸ ನಿರ್ವಹಿಸಲಿದ್ದಾರೆ ಎಂದರು.

ಕೃಷಿಯಲ್ಲಿ ಕಡಿಮೆ ನೀರಿನ ಬಳಕೆ, ತಂತ್ರಜ್ಞಾನ, ಹೆಚ್ಚಿನ ಇಳುವರಿ- ರೋಗನಿರೋಧಕ ತಳಿ ಸೇರಿದಂತೆ ಹಲವು ಸುಧಾರಣೆ ಕ್ರಮಗಳು ನಿರಂತರವಾಗಿ ನಡೆಯುತ್ತಿದೆ. ಕೃಷಿ ವಿಮಾ ಯೋಜನೆಯ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

32 mins ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

34 mins ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

37 mins ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

5 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

5 hours ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

5 hours ago