cheluvarayaswamy
ಬೆಂಗಳೂರು : ಕೃಷಿ ಇಲಾಖೆಯಲ್ಲಿ 1 ಸಾವಿರ ಖಾಲಿ ಹುದ್ದೆಗಳ ನೇಮಕಾತಿಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದ್ದು, ಸೆಪ್ಟೆಂಬರ್ನಲ್ಲಿ ಪರೀಕ್ಷೆ ನಡೆಸಿ 2-3 ತಿಂಗಳ ಒಳಗಾಗಿ ನೇಮಕಾತಿ ಆದೇಶ ನೀಡುವ ಸಾಧ್ಯತೆ ಇದೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಶೇ.70 ರಷ್ಟು ಜನ ಕೃಷಿ ಅವಲಂಬಿತರಾಗಿದ್ದಾರೆ. ಬೇಸಾಯವನ್ನು ಲಾಭದಾಯಕವಾಗಿಸಿದರೆ ಅಷ್ಟು ಜನರ ಬದುಕು ಸುಧಾರಣೆಯಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ ಎಂದರು.
ಇಲಾಖೆಯಲ್ಲಿ ಶೇ.57ರಷ್ಟು ಸಿಬ್ಬಂದಿಗಳ ಕೊರತೆ ಇದೆ. ಅಂದ ಮಾತ್ರಕ್ಕೆ ಯಾವುದೇ ಯೋಜನೆಗಳನ್ನು ನಿಲ್ಲಿಸಿಲ್ಲ. ಜಲಾನಯನ ಯೋಜನೆಯಲ್ಲಿ ಗುರಿ ಮೀರಿದ ಸಾಧನೆ ಮಾಡಿ ಕೇಂದ್ರ ಸರಕಾರದಿಂದ 300 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಪಡೆದುಕೊಳ್ಳಲಾಗಿದೆ. ಕೃಷಿ ಹೊಂಡ ನಿರ್ಮಾಣ ಯೋಜನೆಯನ್ನು 224 ಕ್ಷೇತ್ರಗಳಿಗೂ ವಿಸ್ತರಣೆ ಮಾಡಲಾಗಿದೆ ಎಂದರು.
ಒಂದು ಸಾವಿರ ಹುದ್ದೆಗಳ ನೇಮಕಾತಿಯಾದ ಬಳಿಕ ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ನಿರ್ವಹಣೆಯಾಗಲಿದೆ. ಆವರೆಗೂ ಪ್ರಭಾರ ಜವಾಬ್ದಾರಿಗಳಲ್ಲೇ ಕೃಷಿ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕೆಲಸ ನಿರ್ವಹಿಸಲಿದ್ದಾರೆ ಎಂದರು.
ಕೃಷಿಯಲ್ಲಿ ಕಡಿಮೆ ನೀರಿನ ಬಳಕೆ, ತಂತ್ರಜ್ಞಾನ, ಹೆಚ್ಚಿನ ಇಳುವರಿ- ರೋಗನಿರೋಧಕ ತಳಿ ಸೇರಿದಂತೆ ಹಲವು ಸುಧಾರಣೆ ಕ್ರಮಗಳು ನಿರಂತರವಾಗಿ ನಡೆಯುತ್ತಿದೆ. ಕೃಷಿ ವಿಮಾ ಯೋಜನೆಯ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲಾಗಿದೆ ಎಂದರು.
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…